ಡಿವಿಜಿ ಸುದ್ದಿ, ರಾಮನಗರ: ದೆಹಲಿಯಲ್ಲಿ ಸಿಎಎ ಪರ-ವಿರೋಧದ ಗಲಭೆಗೆ ಬಿಜೆಪಿ ನಾಯಕರ ಪ್ರಚೋದನಕಾರಿ ಭಾಷಣ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
ಬಿಜೆಪಿಯವರು ಅಧಿಕಾರಕ್ಕಾಗಿ ಅಮಾಯಕರನ್ನು ಬಲಿ ತೆಗೆದುಕೊಳ್ಳಲು ಹೊರಟಿದ್ದಾರೆ. ಭಾರತ ಹಿಂದೂ ರಾಷ್ಟ್ರ ವೇ, ಬಿಜೆಪಿಯವರು ಹೊಸದಾಗಿ ಏನು ಮಾಡಬೇಕಿಲ್ಲ. ಒಂದು ಕಡೆ ಅಮೆರಿಕ ಅಧ್ಯಕ್ಷ ಟ್ರಂಪ್ರನ್ನು ಕರೆ ತಂದು ಗುಜರಾತಿನಲ್ಲಿ ಮೆರವಣಿಗೆ ಮಾಡುತ್ತಾರೆ. ಇನ್ನೊಂದೆಡೆ ದೆಹಲಿಯಲ್ಲಿ ಗಲಭೆ ಸೃಷ್ಠಿಸುತ್ತಾರೆ. ಮುಂಬರುವ ದಿನಗಳಲ್ಲಿ ಜನರು ಎಲ್ಲರನ್ನೂ ಅರ್ಥಮಾಡಿಕೊಳ್ಳುತ್ತಾರೆ ಎಂದು ಕಿಡಿಕಾರಿದರು.
ದೊರೆಸ್ವಾಮಿ ಹೋರಾಟ ಮಾಡಿದಾಗ ಯತ್ನಾಳ್ ಹುಟ್ಟಿದ್ದರೋ ಇಲ್ಲವೋ ಗೊತ್ತಿಲ್ಲ.ಆರ್ಎಸ್ಎಸ್ ಫಲಕ, ತಿಲಕ ಇಟ್ಟುಕೊಂಡು ಬಂದು ಆಟಾಡ್ತಾರೆ, ಆಡಲಿ. ಮಹಾರಾಷ್ಟ್ರದ ತಾಕತ್ತು ದೊಡ್ಡದ, ಮಂಡ್ಯ ತಾಕತ್ತು ದೊಡ್ಡದ ಎಂದು ಮುಂದೆ ಜನರೇ ತೀರ್ಮಾನ ಮಾಡುತ್ತಾರೆ ಎಂದು ಮಹಾರಾಷ್ಟ್ರಕ್ಕೆ ಜೈಕಾರ ಹಾಕಿದ ಸಚಿವ ನಾರಾಯಣ ಗೌಡ ತರಾಟೆಗೆ ತಗೆದುಕೊಂಡರು.



