ಪ್ರತಿಭಟನೆ ನಡೆಸಬೇಡಿ ಅನ್ನೋಕೆ ಭೂಮಿ ಏನು ನಿಮ್ಮಪ್ಪನ ಮನೆ ಆಸ್ತಿನಾ..? : ಬೆಂಗಳೂರು ನಗರ ಪೊಲೀಸ್ ಆಯುಕ್ತರ ವಿರುದ್ಧ ಎಚ್.ಡಿ.ಕೆ ಗರಂ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ರಾಮನಗರ: ಬಿಸಿಯೂಟ ಕಾರ್ಯಕರ್ತೆಯರಿಗೆ ಪ್ರತಿಭಟನೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು  ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತಗೆದುಕೊಂಡರು. ಪ್ರತಿಭಟನೆ ನಡೆಸುಬೇಡಿ ಅಂತಾ ಅನ್ನೋದಕ್ಕೆ ಭೂಮಿ ಏನು ನಿಮ್ಮಪ್ಪನ ಆಸ್ತಿನಾ ಎಂದು ಕಿಡಿಕಾರಿದರು.

ರಾಮನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಸಿಯೂಟ ಕಾರ್ಯಕರ್ತರು ಪ್ರತಿಭನೆ ನಡೆಸಲು ಅವಕಾಶ ಕೇಳಿದ್ದಾರೆ. ಬೆಂಗಳೂರು ಪೊಲೀಸರು ನಿನ್ನೆ ರಾತ್ರಿ ಪ್ರತಿಭಟನೆಗೆ ಅವಕಾಶ ನೀಡದಂತೆ ಪತ್ರ ಬರೆದಿದ್ದಾರೆ. ರಸ್ತೆ ಸುರಕ್ಷತೆ ದೃಷ್ಟಿಯಿಂದ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಅಂತ ಕಾರಣ ನೀಡಿದ್ದಾರೆ . ನಿಮ್ಮ ಇಂತಹ ಹೊಸ ಕಾನೂನುಗಳು ನಡೆಯುವುದಿಲ್ಲ.

ಹಿಂದಿನ ಎಲ್ಲಾ ಸರ್ಕಾರ ಇದ್ದಾಗಲೂ ಪ್ರತಿಭಟನೆ ನಡೆಯುತ್ತಿದ್ದವು. ಅಧಿಕಾರದಲ್ಲಿವರು ಪ್ರತಿಭಟನಕಾರರ ಸಮಸ್ಯೆ ಆಲಿಸಬೇಕು. ಆದರೆ, ಪ್ರತಿಭಟನೆ ಹತ್ತಿಕ್ಕುವ ಕ್ರಮ ಸರಿಯಲ್ಲ ಇಂತಹ ಅಧಿಕಾರಿಗಳು ಹತೋಟಿಗೆ ತರದಿದ್ದರೆ, ಗೃಹ ಸಚಿವರೇ ಧೂಳಿಪಟ ಆಗ್ತೀರಿ ಅಂತ ಎಚ್ಚರಿಕೆ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *