ದೇವೇಗೌಡರ ನೇತೃತ್ವದಲ್ಲಿ ಸಿಎಂ ಮನೆ ಮುಂದೆ ಪ್ರತಿಭಟನೆ : ಎಚ್.ಡಿ. ರೇವಣ್ಣ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಹಾಸನ: ಹಿಂದಿನ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರದ ಅವಧಿಯಲ್ಲಿ ಅಷ್ಠಾನಗೊಳಿಸಿರುವ ಕಾಮಗಾರಿ ತಡೆ ಹಿಡಿದಿದ್ದನ್ನು ವಿರೋಧಿಸಿ   ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ  ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮುಂದೆ ಹಾಸನದ ಎಲ್ಲಾ ಶಾಸಕರು ಪ್ರತಿಭಟನೆ ನಡೆಸುತ್ತೇವೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನದಲ್ಲಿ ಕಾಮಗಾರಿ ತಡೆ ಹಿಡಿದಿರುವ ಕುರಿತು ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಎಲ್ಲಾ ಶಾಸಕರು ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ಆದರೆ,  ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ . ಹೀಗಾಗಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ದೇವೇಗೌಡರು ವ್ಯಾಸಂಗ ಮಾಡಿದ ಹಾಸನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ 150 ಸೀಟು ಕಡಿಮೆ ಮಾಡಿದ್ದಾರೆ. ಇದಲ್ಲದೆ,  ದೇವೇಗೌಡರು ವ್ಯಾಸಂಗ ಮಾಡಿದ ಆ  ಕಾಲೇಜು ಮುಚ್ಚಲು ಹುನ್ನಾರ ನಡೆದಿದೆ ಎಂದು ಆರೋಪಿಸಿದರು.

ಯಡಿಯೂರಪ್ಪರವರಿಗೆ ಶಿವಮೊಗ್ಗದಲ್ಲಿ ಕಾಲೇಜು ನಿರ್ಮಿಸಿದ ದೊರೆಸ್ವಾಮಿ ಕೈಯಲ್ಲಿ ಕಾಲೇಜು ಆಡಳಿತ ನಡೆಯುತ್ತಿದೆ.  ದೇವೇಗೌಡರು ಸಿಎಂ ಕೈಕಟ್ಟಿ ನಿಲ್ಲುತ್ತಿದ್ದ ದೊರೆಸ್ವಾಮಿಗೆ ಸರ್ಕಾರ ಪಾಲಿಟೆಕ್ನಿಕ್ ಕಾಲೇಜು ಬಳುವಳಿ ಕೊಡಲು ಸಿದ್ಧತೆ ನಡೆಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *