ವಿವಾದಿತ ಯೇಸು ಪ್ರತಿಮೆ ವಿಚಾರದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಿ; ಬಹಿರಂಗ ಹೇಳಿಕೆ ಬೇಡ:ಸಿಎಂ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಕಪಾಲಿ ಬೆಟ್ಟದಲ್ಲಿ ಯೇಸು ಪ್ರತಿಮೆ ನಿರ್ಮಾಣ ವಿಚಾರವಾಗಿ ಬಿಜೆಪಿ ಎಚ್ಚರಿಕೆ ಹೆಜ್ಜೆ ಇಡಲು ಮುಂದಾಗಿದೆ. ಪ್ರತಿಮೆ ನಿರ್ಮಾಣಕ್ಕೆ ಪಕ್ಷದ ನಾಯಕರು ಬಹಿರಂಗ ಹೇಳಿಕೆ ಕೊಡುವುದಕ್ಕಿಂತ  ಕಾನೂನಾತ್ಮಕ ಕ್ರಮ ಬಳಸಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.

ಪೌರತ್ವದ ಪ್ರತಿಭಟನೆಯಿಂದ ಕಂಗೆಟ್ಟಿರುವ ಬಿಜೆಪಿಗೆ ಎಚ್ಚರಿಕೆ ಹೆಜ್ಜೆ ಹಿಡಲು ಮುಂದಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಚಿವರುಗಳಿಗೆ ಸಿಎಂ ಯಡಿಯೂರಪ್ಪ ಕಿವಿಮಾತು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಏಸು ಪ್ರತಿಮೆ ವಿರುದ್ಧ ಧ್ವನಿ ಎತ್ತಿ ಸಮಸ್ಯೆ ಸೃಷ್ಠಿಸಿಕೊಳ್ಳುವುದು ಬೇಡ.  ಸರ್ಕಾರಿ ಗೋಮಾಳ ಜಮೀನು ಕಾನೂನಾತ್ಮಕವಾಗಿ ಇದೆಯೋ ಇಲ್ಲವೋ ನೋಡೋಣ. ಈಗಾಗಲೇ ವರದಿ ಕೇಳಿದ್ದು, ಜಿಲ್ಲಾಧಿಕಾರಿ ವರದಿ ಕೊಟ್ಟ ಬಳಿಕ ಕಾನೂನಾತ್ಮಕವಾಗಿ ಕ್ರಮ ಕೈಗೊಂಡು ಸುಮ್ಮನೆ ಆಗೋಣ. ವಿಷಯ ದೊಡ್ಡದು ಮಾಡಿ ಡಿಕೆಶಿ ಹಾಗೂ ಕಾಂಗ್ರೆಸ್ ಲಾಭ ಮಾಡಿಕೊಡೋದು ಬೇಡ ಎಂದಿದ್ದಾರೆ.

ರಾಮನಗರ ಜಿಲ್ಲೆ ಕಪಾಲಿ ಬೆಟ್ಟದ ಜಮೀನು ವಿವಾದದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ, ಆ ಪ್ರಸ್ತಾವನೆಯೂ ಇವತ್ತಿನ ಸಂಪುಟದಲ್ಲಿ ಇರಲಿಲ್ಲ ಅಂತಾ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಮಾಧುಸ್ವಾಮಿ ಹೇಳಿದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *