ತಂದೆ-ತಾಯಿ ಶಿವಕುಮಾರ್ ಅಂತಾ ಹೆಸರಿಟ್ರೆ, ನೀವು ಏಸುಕುಮಾರ ಆಗ್ತೀನಿ ಅಂತೀರಲ್ಲ..? : ರೇಣುಕಾಚಾರ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕಾಲಭೈರವನ ಆರಾಧಕರಾದ ಡಿ.ಕೆ.ಶಿವಕುಮಾರ್  ಅವರಿಗೆ ತಂದೆ-ತಾಯಿ, ಶಿವಕುಮಾರ್ ಅಂತಾ ಹೆಸರಿಟ್ಟರೆ ನೀವು  ಏಸು ಕುಮಾರನಾಗಲು ಆಗ್ತೀನಿ ಅಂತೀರಲ್ಲ ..? ಎಂದು  ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವ್ಯಂಗ್ಯವಾಡಿದ್ರು.

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಕೆಶಿ ಕಾಲಭೈರವನ ಬೆಟ್ಟದಲ್ಲಿ ಅದರಲ್ಲೂ ಸರ್ಕಾರಿ ಗೋಮಾಳದಲ್ಲಿ ಏಸುವಿನ ಪ್ರತಿಮೆ ನಿರ್ಮಾಣ ಮಾಡಲು ಹೊರಟಿದ್ದಾರೆ. ಡಿಕೆಶಿ ತಂದೆ ತಾಯಿ ಶಿವನ ಆರಾಧನೆ ಮಾಡುತ್ತಾರೆ. ಅವರು ಇಂತಹ ಸುಪುತ್ರನನ್ನು ಪಡೆಯಲು ಪುಣ್ಯ ಮಾಡಿರಬೇಕು ಎಂದು ಟೀಕಿಸಿದರು.

ಇನ್ಮುಂದೆ ಶಿವಕುಮಾರ್ ಹೆಸರು ಕರೆಯುವುದಕ್ಕಿಂತ. ಏಸು ಕುಮಾರ ಅಂತಾ ನಾವೇ ನಾಮಕರಣ ಮಾಡಿ ಬಿಡೋಣ.. ಡಿಕೆಶಿ ಇಡೀ ರಾಜ್ಯಕ್ಕೆ ಅವಮಾನ ಮಾಡಿದ್ದಾರೆ. ಪವಿತ್ರವಾದ ಕಾಲಭೈರವನ ಬೆಟ್ಟದಲ್ಲಿ ಏಸುವಿನ ವಿಗ್ರಹ ಮಾಡಲು ಹೊರಟಿದ್ದೀರಲ್ಲ. ಅದರಲ್ಲೂ ಸರ್ಕಾರಿ ಜಾಗದಲ್ಲಿ  ನಿಮ್ನನ್ನು ಏನು ಎಂದು ಕರೆಯಬೇಕು ಎಂದು ಕಿಡಿಕಾರಿದರು.

ಆಯೋಧ್ಯೆಯಲ್ಲಿ ಶ್ರೀರಾಮನ ಮಂದಿರ ಕಟ್ಟಲು ವಿರೋಧ ಮಾಡಿದರು. ವಲ್ಲಬಾಯಿ ಪಟೇಲ್ ಪ್ರತಿಮೆ ನಿರ್ಮಾಣ ಮಾಡಿದಾಗ ವಿರೋಧ ಮಾಡಿದವರಿಗೆ  ಕಾಲಭೈರವನ ಬೆಟ್ಟದಲ್ಲಿ ಏಸುವಿನ ಪ್ರತಿಮೆ ನಿರ್ಮಾಣ ಮಾಡಲು ಬಿಡೋದಿಲ್ಲ ಎಂದರು.

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *