ಡಿವಿಜಿ ಸುದ್ದಿ, ಹುಬ್ಬಳ್ಳಿ: ದೆಹಲಿಯ ಜವಾಹರಲಾಲ್ ವಿಶ್ವವಿದ್ಯಾಲಯಕ್ಕೆ ಗುಂಪೊಂದು ನುಗ್ಗಿ ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ನಡೆದಿರುವ ಹಲ್ಲೆಯನ್ನು ಬಿಜೆಪಿ ಖಂಡಿಸಿದ್ದು, ಈ ಘಟನೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯದಲ್ಲಿ ಹಿಂದಿನಿಂದಲೂ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎನ್ನುವ ದೂರುಗಳಿದ್ದವು. ಈ ಹಿನ್ನೆಲೆಯಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಸಾಧ್ಯತೆ ಇದ್ದು, ಈ ಬಗ್ಗೆ ತನಿಖೆ ನಡೆಯಲಿದೆ ಎಂದು ತಿಳಿಸಿದರು.
ಇದೊಂದು ಎರಡು ಗುಂಪುಗಳ ನಡುವಿನ ಘರ್ಷಣೆಯಂತೆ ಕಂಡುಬಂದಿದೆ. ಆದರೆ, ಕಾಂಗ್ರೆಸ್ ಪಕ್ಷ, ಈ ಘಟನೆ ಹಿಂದೆ ಬಿಜೆಪಿ ಇದೆ ಎಂದು ಆರೋಪಿಸಿದೆ. ಇಂತಹ ಹೇಳಿಕೆ ಸಣ್ಣತನ ರಾಜಕಾರಣ ಎಂದು ಟೀಕಿಸಿದರು.
.



