ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ  ಆಸೆ ಇದೆ: ಕುಮಾರಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ರಾಮನಗರ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‍ ನಲ್ಲಿನ ಕೆಲವು ನಾಯಕರಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕೆಂಬ ಆಸೆಯಿದೆ. ಸಿದ್ದರಾಮಯ್ಯನವರೇ ನಾವು ಚುನಾವಣೆಯಲ್ಲಿ ಯಾವುದೇ ರೀತಿಯಲ್ಲಿ ಭಾಗವಹಿಸಿಲ್ಲ ಎಂದಿದ್ದಾರೆ. ಹೀಗಾಗಿ ಪಕ್ಷೇತರ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿರುಬಹುದು ಎಂದು ಮಾಜಿ ಸಿಎಂ ಹೆಚ್‍. ಡಿ ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಕೆಲವು ನಾಯಕರಿಗೆ ಬಿಜೆಪಿ  ಸರ್ಕಾರ ಬರಲು ಪರೋಕ್ಷ ಬೆಂಬಲ ನೀಡಿದ್ದರೋ ಅವರಿಗೆ ಬಿಜೆಪಿ ಅಭ್ಯರ್ಥಿ ಗೆಲ್ಲಬೇಕೆಂಬ ಆಸೆಯಿದೆ. ಎಂಎಲ್‍ಸಿ ಚುನಾವಣಾ ಸಂಬಂಧ ನಾನು ಯಾವುದೇ ಗಮನ ಕೊಟ್ಟಿಲ್ಲ. ವಿಧಾನಪರಿಷತ್‍ ಚುನಾವಣೆಯಲ್ಲಿ ಸಮಾನ ಮನಸ್ಕರ ಮತ ಪಡೆಯಲು ಪ್ರಯತ್ನಿಸುತ್ತೇನೆ ಅವಕಾಶ ಕೊಡಿ ಎಂದು ಪಕ್ಷೇತರ ಅಭ್ಯರ್ಥಿ ರೇವಣ್ಣ ಅವರನ್ನು ಕೇಳಿಕೊಂಡಿದ್ದಾರೆ.  ಅದಕ್ಕಾಗಿ ರೇವಣ್ಣನವರು ಅರ್ಜಿ ಹಾಕಲು 10 ಶಾಸಕರ ಸಹಿ ಹಾಕಿಸಿಕೊಟ್ಟಿದ್ದರು.  ನನ್ನನ್ನ ಕೇಳಿ ಅವರು ನಾಮಪತ್ರ ಹಾಕಿಲ್ಲ ಎಂದು ತಿಳಿಸಿದರು.

ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಎ.ಪಿ ರಂಗನಾಥ್ ನಮ್ಮ ಪಕ್ಷದ ಅಭ್ಯರ್ಥಿಯಾಗಿದ್ದಾರೆ.  ಬೇರೆಯವರ ರೀತಿ ಅಮಿತ್ ಶಾ, ಮೋದಿ ಫೋಟೋ ಹಾಕಿಕೊಂಡು ಟಿಫನ್ ಬಾಕ್ಸ್ ಕೊಡ್ತಿದ್ದಾರಲ್ಲ ಆ ರೀತಿಯ ಕೆಲಸ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ  ಪುಟ್ಟಣ್ಣಗೆ ಟಾಂಗ್ ನೀಡಿದ್ದಾರೆ.

.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *