ಡಿವಿಜಿ ಸುದ್ದಿ, ಮುಂಬೈ: ವಿಶ್ವಾಸ ಮತಯಾಚನೆಗೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ನಾಳೆಯ ವಿಶ್ವಾಸ ಮತಯಾಚನೆಗೂ ಮುನ್ನವೇ ರಾಜೀನಾಮ ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿ ಅಲ್ಪಾವಧಿ ಸರ್ಕಾರ ಪತನವಾಗಿದೆ.
ಸುಪ್ರೀಂ ಕೋರ್ಟ್ ಬುಧವಾರ ಸಂಜೆ 5 ಗಂಟೆಯೊಳಗಡೆ ಬಹುಮತ ಸಾಬೀತು ಪಡಿಸುವಂತೆ ಬಿಜೆಪಿ ಸರ್ಕಾರಕ್ಕೆ ಸೂಚಿಸಿತ್ತು. ಈ ಆದೇಶದ ಬಳಿಕ ಸಂಖ್ಯಾಬಲ ಇಲ್ಲದ ಹಿನ್ನೆಲೆಯಲ್ಲಿ ಅಜಿತ್ ಪವಾರ್ ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇಂದು ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ರಾಜೀನಾಮೆ ನೀಡುವುದಾಗಿ ಫಡ್ನವೀಸ್ ಪ್ರಕಟಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫಡ್ನವೀಸ್, ಬಿಜೆಪಿ ಚುನಾವಣೆಯಲ್ಲಿ 105 ಸ್ಥಾನ ಗೆದ್ದು ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಚುನಾವಣೆಯಲ್ಲಿ ಸೀಟು ಹಂಚಿಕೆ ಮಾಡಿಕೊಂಡಿದ್ದ ಶಿವಸೇನೆ ಜನಾದೇಶವನ್ನು ಧಿಕ್ಕರಿಸಿ, ಶಿವಸೇನೆ ನಂಬರ್ ಆಟಕ್ಕೆ ಮುಂದಾಗಿತ್ತು. ಶಿವಸೇನೆಗೆ ಮುಖ್ಯಮಂತ್ರಿ ಸ್ಥಾನ ಎಂದು ತೀರ್ಮಾನವಾಗಿರಲಿಲ್ಲ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಅಮಿತ್ ಈ ಬಗ್ಗೆ ಹಲವು ಬಾರಿ ಸ್ಪಷ್ಟಪಡಿಸಿದ್ದರು ಎಂದು ಹೇಳಿದರು.
ಮೊದಲ ಬಾರಿಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿದಾಗ ನಮ್ಮ ಜೊತೆಗೆ ಶಿವಸೇನೆ ನಮ್ಮ ಜೊತೆಗೆಇರಲಿಲ್ಲ . ಹಾಗಾಗಿ ನಾವು ಸರ್ಕಾರ ರಚನೆ ಮಾಡಲು ಆಗಲಿಲ್ಲ. ಪ್ರತಿಯೊಂದು ಪಕ್ಷಕ್ಕೂ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿದ್ದರು. ಯಾರು ಸರ್ಕಾರ ರಚನೆಗೆ ಮುಂದಾಗದೇ ಇದ್ದಾಗ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸ್ಸು ಮಾಡಲಾಗಿತ್ತು.



