Connect with us

Dvgsuddi Kannada | online news portal | Kannada news online

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ :ಡಿ.ಕೆ. ಶಿವಕುಮಾರ್

ಪ್ರಮುಖ ಸುದ್ದಿ

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ :ಡಿ.ಕೆ. ಶಿವಕುಮಾರ್

ಡಿವಿಜಿ ಸುದ್ದಿ, ಬೆಂಗಳೂರು:  ಎಂ.ಬಿ ಪಾಟೀಲ ಸೇರಿದಂತೆ ಎಲ್ಲ ನಾಯಕರು ನಾನು ಪಕ್ಷದ ಅಧ್ಯಕ್ಷನಾಗಬೇಕು ಎಂದು ಸೂಚಿಸಿದ್ದಾರೆ . ನಮ್ಮ ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಗುರಿ ಎಂದು ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಮಾಜಿ ಸಚಿವ  ಎಂ.ಬಿ. ಪಾಟೀಲ ಅವರನ್ನು ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿ ಬಳಿಕ ಮಾತನಾಡಿದ ಅವರು, ನನಗೆ ಗೊತ್ತಿಲ್ಲದೆ ಎಂ.ಬಿ ಪಾಟೀಲ ಸೇರಿದಂತೆ ಬಹುತೇಕ ನಾನು ಅಧ್ಯಕ್ಷ ಆಗಬೇಕು

ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ, ಸ್ಪರ್ಧೆ ಇರಲಿಲ್ಲ. ಮಾಧ್ಯಮದಲ್ಲಿ ಭಿನ್ನಾಭಿಪ್ರಾಯ  ಅಂತಾ ವರದಿ ಮಾಡಿದ್ದೀರಿ.  ಇಂತಹ ಊಹಾಪೋಹಗಳಿಗೆ  ತೆರೆ ಎಳೆದು ಎಲ್ಲರು ಒಟ್ಟಾಗಿ ಪಕ್ಷ ಕಟ್ಟಬೇಕಿದೆ. ಈ ಬಗ್ಗೆ ಎಂ.ಬಿ. ಪಾಟೀಲರ ಜೊತೆಯಾಗಿ ಮಾತನಾಡುತ್ತಿದ್ದೇನೆ ಎಂದರು. ನಮ್ಮಲ್ಲಿ ಯಾವುದೇ ವ್ಯಕ್ತಿಗತ ವಿಚಾರವಿಲ್ಲ. ಸಿದ್ಧಾಂತದ ಆಧಾರದ ಮೇಲೆ ನಾವು ಪಕ್ಷದಲ್ಲಿ ಇದ್ದೇವೆ ಎಂದರು.

ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ ಕೆಲಸ ಮಾಡಿ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕಿದೆ.   ಜನರ ಭಾವನೆಗೆ ತಕ್ಕಂತೆ ಮುನ್ನೆಡೆಸುವುದು ನಮ್ಮ ಗುರಿ ಎಂದು ಹೇಳಿದರು.
 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top