ಡಿವಿಜಿ ಸುದ್ದಿ, ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಇನ್ನೂ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಗಲಭೆಗೆ ಸಂಬಂಧ ಡಿ. ಕೆ. ಶಿವಕುಮಾರ್, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. ಶಿವಕುಮಾರ್ ಗೂಂಡಾ ಮನಸ್ಥಿತಿಯಿಂದ ಹೊರಬರಬೇಕು. ಇಲ್ಲದಿದ್ದರೆ ನಿಮಗೇ ಕೆಟ್ಟ ಹೆಸರು ಎಂದರು.
ಎಐಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಿಟಿ ರವಿ ವ್ಯಂಗ್ಯವಾಡಿದ್ದು, ಕಾಂಗ್ರೆಸ್ಸಿನವರಿಗೆ ಗಾಂಧಿ ಕುಟುಂಬವನ್ನು ಬಿಟ್ಟರೆ ಗತಿಯಿಲ್ಲ. ಹಾಗಾಗಿಯೇ ಅಧ್ಯಕ್ಷಗಾದಿಯತ್ತ ಗಾಂಧಿ ಕುಟುಂಬವನ್ನೇ ಅವಲಂಬಿಸಿಕೊಂಡಿದ್ದಾರೆ. ಕಾಂಗ್ರೆಸ್ಸಿಗರು ಇನ್ನೂ ಗಾಂಧಿ ಕುಟುಂಬದ ಮೇಲೆ ಅವಲಂಬಿತರಾಗಿದ್ಧಾರೆ ಎಂದರು.



