ಡಿ.ಕೆ. ಶಿವಕುಮಾರ್ ಕೊತ್ವಾಲ್ ರಾಮಚಂದ್ರ ಶಿಷ್ಯ ಮನ ಸ್ಥಿತಿಯಿಂದ ಹೊರ ಬಂದಿಲ್ಲ: ಸಿ.ಟಿ. ರವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಚಿಕ್ಕಮಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೊತ್ವಾಲ್ ರಾಮಚಂದ್ರನ ಶಿಷ್ಯನ ಮನಸ್ಥಿತಿಯಿಂದ ಇನ್ನೂ ಹೊರಬಂದಿಲ್ಲ ಎಂದು ಸಚಿವ ಸಿ.ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬೆಂಗಳೂರು ಗಲಭೆಗೆ ಸಂಬಂಧ ಡಿ. ಕೆ. ಶಿವಕುಮಾರ್, ತನಿಖೆ ನಡೆಯುವ ಹಂತದಲ್ಲೇ ಧಮ್ಕಿ ಹಾಕುವುದು ಸರಿಯಲ್ಲ. ತಾವು ಕೊತ್ವಾಲ್ ರಾಮಚಂದ್ರನ ಶಿಷ್ಯ ಅಂತ ತೋರಿಸಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಗೂಂಡಾಗಳಂತೆ ಧಮ್ಕಿ ಹಾಕುವ ಅವಕಾಶವಿಲ್ಲ. ಶಿವಕುಮಾರ್ ಗೂಂಡಾ ಮನಸ್ಥಿತಿಯಿಂದ ಹೊರಬರಬೇಕು. ಇಲ್ಲದಿದ್ದರೆ ನಿಮಗೇ ಕೆಟ್ಟ ಹೆಸರು ಎಂದರು.

ಎಐಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಿಟಿ ರವಿ ವ್ಯಂಗ್ಯವಾಡಿದ್ದು, ಕಾಂಗ್ರೆಸ್ಸಿನವರಿಗೆ ಗಾಂಧಿ ಕುಟುಂಬವನ್ನು ಬಿಟ್ಟರೆ ಗತಿಯಿಲ್ಲ. ಹಾಗಾಗಿಯೇ ಅಧ್ಯಕ್ಷಗಾದಿಯತ್ತ ಗಾಂಧಿ ಕುಟುಂಬವನ್ನೇ ಅವಲಂಬಿಸಿಕೊಂಡಿದ್ದಾರೆ. ಕಾಂಗ್ರೆಸ್ಸಿಗರು ಇನ್ನೂ ಗಾಂಧಿ ಕುಟುಂಬದ ಮೇಲೆ ಅವಲಂಬಿತರಾಗಿದ್ಧಾರೆ ಎಂದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *