Connect with us

Dvgsuddi Kannada | online news portal | Kannada news online

ನನಗೂ ಸಚಿವ ಸ್ಥಾನ ನೀಡಿ: ನೆಹರು ಓಲೇಕಾರ

ಪ್ರಮುಖ ಸುದ್ದಿ

ನನಗೂ ಸಚಿವ ಸ್ಥಾನ ನೀಡಿ: ನೆಹರು ಓಲೇಕಾರ

ಡಿವಿಜಿ ಸುದ್ದಿ, ಹಾವೇರಿ: ನಾನು ಮೂರು ಬಾರಿ ಶಾಸಕನಾಗಿದ್ದು, ಪಕ್ಷದಲ್ಲಿ ಸಿನೀಯರ್ ಇದ್ದೀನಿ.  ನನಗೂ ಸಚಿವ ಸ್ಥಾನ ನೀಡಿ ಎಂದು ಹಾವೇರಿ ಶಾಸಕ ನೆಹರು ಓಲೇಕಾರ ಆಗ್ರಹಿಸಿದ್ದಾರೆ.

ಹಾವೇರಿಯಲ್ಲಿ ಮಾಯತನಾಡಿದ ಅವರು, ಜನವರಿ 29ಕ್ಕೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಸಿಎಂ ಯಡಿಯೂರಪ್ಪ ಅವರು  ಹೇಳಿದ್ದಾರೆ.  ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯದವರು ಇದ್ದರೆ ಗೌರವ ಇರುತ್ತೆ. ಸಚಿವ ಸ್ಥಾನಕ್ಕೆ ಮಠಾದೀಶರು ಸೇರಿದಂತೆ ಎಲ್ಲರೂ ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದರು.

17 ಜನರಿಂದಲೇ ಬಿಜೆಪಿ ಸರ್ಕಾರ ಬಂದಿದೆ. ಅವರ ತ್ಯಾಗದಿಂದಲೇ ಯಡಿಯೂರಪ್ಪ ಅವರು ಸಿಎಂ ಆಗಿದ್ದಾರೆ. ಅವರಿಗೆ ಸಚಿವ ಸ್ಥಾನ ಕೊಡಲು ತಕರಾರಿಲ್ಲ ಎಂದರು .

ಸೋತವರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಕೊಟ್ಟು ತೃಪ್ತಿ ಮಾಡಬೇಕು. ಸೋತವರಿಗೆ ಸಚಿವ ಸ್ಥಾನ ಕೊಟ್ಟರೆ ಜನರು ತಪ್ಪಾಗಿ ಮಾತನಾಡಿಕೊಳ್ತಾರೆ. ಹಿರಿಯರಿಗೆ ಪಕ್ಷ ಸಂಘಟನೆ ಜವಾಬ್ದಾರಿ ಕೊಡುವ ಬಗ್ಗೆ ಪಕ್ಷದ ನಾಯಕರು ಚರ್ಚಿಸಿದ್ದಾರೆ. ಹಿರಿಯರನ್ನ ಕೈಬಿಟ್ಟು ಹೊಸಬರಿಗೆ ಕೊಡೋ ವಿಚಾರವಿದೆ ಎಂದು ತಿಳಿದಿದೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top