Connect with us

Dvgsuddi Kannada | online news portal | Kannada news online

ಕುಮಟಳ್ಳಿಗೆ ಅನ್ಯಾಯವಾದ್ರೆ, ರಾಜೀನಾಮೆ ನೀಡಲು ಸಿದ್ಧ: ಸಚಿವ ರಮೇಶ್ ಜಾರಕಿಹೊಳಿ

ಪ್ರಮುಖ ಸುದ್ದಿ

ಕುಮಟಳ್ಳಿಗೆ ಅನ್ಯಾಯವಾದ್ರೆ, ರಾಜೀನಾಮೆ ನೀಡಲು ಸಿದ್ಧ: ಸಚಿವ ರಮೇಶ್ ಜಾರಕಿಹೊಳಿ

ಡಿವಿಜಿ ಸುದ್ದಿ, ಬೆಳಗಾವಿ: ನಿಮ್ಮಿಂದ ನನಗೆ ಅನ್ಯಾಯವಾಗಿದೆ ಎಂದು ಶಾಸಕ ಮಹೇಶ್ ಕಮ್ಮಟಳ್ಳಿ ಒಂದೇ ಒಂದು ಮಾತನಾಡಿದರೂ, ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದು ಜಲ ಸಂಪನ್ಮೂಲ ಖಾತೆ ಸಚಿವ ರಮೇಶ್  ಜಾರಕಿಹೊಳಿ ಹೇಳಿದರು.

ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಮಹೇಶ್ ಕಮಟಳ್ಳಿ, ನಾನು ರಾಜೀನಾಮೆ ನೀಡಿದ್ದಕ್ಕೆ ಬಿಜೆಪಿ ಸರ್ಕಾರ ಬಂದಿದೆ. ಅವರಿಗೆ ಯಾವುದೇ ರೀತಿಯ ಅನ್ಯಾಯ ಆಗುವುದಕ್ಕೆ ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಇನ್ನು ಉನ್ನತ ಹುದ್ದೆ ಸಿಗುವ ವಿಶ್ವಾಸವಿದೆ.  ನಿಮ್ಮಿಂದ ನನಗೆ ಅನ್ಯಾಯವಾಗಿದೆ ಎಂದು ಮಹೇಶ್ ಕುಮಟಳ್ಳಿ ಒಂದೇ ಒಂದು ಮಾತನಾಡಿದರೂ, ನಾನು ಸಚಿವ ಸ್ಥಾನ ಸೇರಿದಂತೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದರು.

ಬೆಳಗಾವಿ ಉಸ್ತುವಾರಿಯನ್ನು ಸಚಿವ ಜಗದೀಶ್ ಶೆಟ್ಟರ್ ಅವರಿಗೆ ನೀಡಿರುವುದಕ್ಕೆ  ನಮಗೆ ಬೇಸರವಿಲ್ಲ. ನಾವು ಅವರನ್ನು ಹಾಕಿಸಿಕೊಂಡಿದ್ದೇವೆ. ಅವರು ಎಷ್ಟು ದಿನ ಇರುತ್ತಾರೋ ಅಲ್ಲಿವರೆಗೆ ಇರಲಿ. ಬದಲಾವಣೆ ಮಾಡಿದರೆ, ನಮಗೆ ಜಿಲ್ಲಾ ಉಸ್ತುವಾರಿ ನೀಡುವಂತೆ ಕೇಳಿಕೊಳ್ಳುತ್ತೇವೆ.  ನಾನು ರಮೇಶ್ ಕತ್ತಿ, ಉಮೇಶ್ ಕತ್ತಿ, ಬಾಲಚಂದ್ರ ಜಾರಕಿಹೊಳಿ ಸೇರಿಕೊಂಡೇ ಚುನಾವಣೆ ಎದುರಿಸಿದ್ದೇವೆ. ನಮ್ಮ ನಡುವೆ ಉತ್ತಮ ಸಂಬಂಧವಿದೆ ಎಂದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top