Connect with us

Dvgsuddi Kannada | online news portal | Kannada news online

ರಾಜೀನಾಮೆ ಕೊಟ್ಟವರ ತಾಳ್ಮೆ ಪರೀಕ್ಷಿಸಬೇಡಿ: ಶ್ರೀನಿವಾಸ್ ಪ್ರಸಾದ್

ಪ್ರಮುಖ ಸುದ್ದಿ

ರಾಜೀನಾಮೆ ಕೊಟ್ಟವರ ತಾಳ್ಮೆ ಪರೀಕ್ಷಿಸಬೇಡಿ: ಶ್ರೀನಿವಾಸ್ ಪ್ರಸಾದ್

ಡಿವಿಜಿ ಸುದ್ದಿ, ಮೈಸೂರು: 17 ಶಾಸಕರು ರಾಜೀನಾಮೆಯಿಂದ ಬಿಜೆಪಿ ಸರ್ಕಾರ ಬಂದಿದೆ. ರಾಜೀನಾಮೆ ಕೊಟ್ಟವರಿಗೆ ಸಚಿವ ಸ್ಥಾನ ನೀಡದೆ ತಾಳ್ಮೆ ಪರೀಕ್ಷಿಸಬೇಡಿ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ 17 ಜನ ಜೊತೆ ವೈಯಕ್ತಿಕವಾಗಿ ಮಾತನಾಡಿದ ನಂತರವೇ ಅವರು ರಾಜೀನಾಮೆ ಕೊಟ್ಟಿದ್ದಾರೆ. ಅವರು ಏನು ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ. ಆದರೆ, 17 ಜನಕ್ಕೂ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದ ಸಿಎಂ, ಕೊಟ್ಟ ಮಾತು ಉಳಿಸಿಕೊಳ್ಳಬೇಕಿದೆ ಎನ್ನುವ ಮೂಲಕ ಉಪ ಚುನಾವಣೆಯಲ್ಲಿ ಸೋತಿರುವ ಮಾಜಿ ಸಚಿವ ಎಚ್. ವಿಶ್ವಾನಾಥ್ ಹಾಗೂ ಎಂಟಿಬಿ ನಾಗರಾಜ್ ಪರ ಬ್ಯಾಟ್ ಬೀಸಿದರು.

ಸಂಪುಟ ವಿಸ್ತರಣೆ ವಿಳಂಬ ಮಾಡದೇ ಇವತ್ತೇ ವರಿಷ್ಠರ ಜೊತೆ ಮಾತನಾಡಿ ಮುಖ್ಯಮಂತ್ರಿ ಬಗೆಹರಿಸಿಕೊಂಡು ಬರಬೇಕು. ಈ ಮೂಲಕ ಪರಿಪೂರ್ಣ ಸಂಪುಟದೊಂದಿಗೆ ರಾಜ್ಯದಲ್ಲಿ ಉತ್ತಮ ಆಡಳಿತ ನೀಡಬೇಕಿದೆ. ಯಡಿಯೂರಪ್ಪ ಕೊಟ್ಟ ಮಾತು ಉಳಿಸಿಕೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top