ನವದೆಹಲಿ: ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್ ದಾಳಿ ನಡೆಸಿ. ಆದರೆ, ಕಾಂಗ್ರೆಸ್ ವಿರುದ್ಧವೇ ದಾಳಿ ನಡೆಸುವುದು ಸರಿಯಲ್ಲ ಎಂದು ತಮ್ಮದೇ ಪಕ್ಷದ ನಾಯಕರಿಗೆ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಕಿಡಿಕಾರಿದ್ದಾರೆ.
ಉತ್ತರ ಪ್ರದೇಶದ ಪ್ರಭಾವಿ ಕಾಂಗ್ರೆಸ್ ಜಿತಿನ್ ಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಹೋರಾಟಕ್ಕೆ ಇಳಿದಿರುವುದು ಆಕ್ಷೇಪ ವ್ಯಕ್ತಪಡಿಸಿದ ಅವರು, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ಪಕ್ಷ, ಬಿಜೆಪಿಯನ್ನು ಗುರಿಯಾಗಿಸಿಕೊಂಡು ಸರ್ಜಿಕಲ್ ದಾಳಿ ನಡೆಸುವ ಬದಲು ಕಾಂಗ್ರೆಸ್ಸಿಗರನ್ನೇ ಗುರಿಯಾಗಿಸಿಕೊಂಡಿರುವುದು ದುರಾದುಷ್ಟಕರ. ಆ ಮೂಲಕ ತನ್ನ ಶಕ್ತಿಯನ್ನು ವ್ಯಯಮಾಡಿಕೊಳ್ಳುತ್ತಿದೆ ಎಂದಿದ್ದಾರೆ.
Unfortunate that Jitin Prasada is being officially targeted in UP
Congress needs to target the BJP with surgical strikes instead wasting its energy by targeting its own
— Kapil Sibal (@KapilSibal) August 27, 2020
ಉತ್ತರ ಪ್ರದೇಶದಲ್ಲಿ ಜಿತಿನ್ ಪ್ರಸಾದ್ ಅವರನ್ನು ಗುರಿಯಾಗಿಸಿಕೊಂಡು ಹೋರಾಟಕ್ಕೆ ಇಳಿದಿರುವುದು ಹಾಗೂ ಶಿಸ್ತು ಕ್ರಮಕ್ಕೆ ಮುಂದಾಗಿರುವುದು ಒಳ್ಳೆಯ ಬೆಳವಣಿಗೆಯಲ್ಲ, ಅಧ್ಯಕ್ಷರ ಬದಲಾವಣೆಗಾಗಿ ಪತ್ರ ಬರೆದಿರುವುದಕ್ಕೆ ಈ ಶಿಕ್ಷೆಯೇ ಎಂದು ಕಪಿಲ್ ಸಿಬಲ್ ಸೇರಿದಂತೆ ಕೆಲ ಮುಖಂಡರು ಪ್ರಶ್ನೆ ಮಾಡಿದ್ದಾರೆ. ಸಕ್ರಿಯ ಅಧ್ಯಕ್ಷರು ಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ 23 ಜನ ಪತ್ರ ಬರೆದವರಲ್ಲಿ ಜಿತಿನ್ ಪ್ರಸಾದ್ ಕೂಡ ಒಬ್ಬರಾಗಿದ್ದಾರೆ.



