Connect with us

Dvgsuddi Kannada | online news portal | Kannada news online

ಜೆಡಿಎಸ್ ಗೆ ಗುಡ್ ಬೈ ಹೇಳಲು ಜೆಡಿಎಸ್ ವಕ್ತಾರ ರಮೇಶ್ ಬಾಬು ಸಿದ್ಧತೆ..?

ಪ್ರಮುಖ ಸುದ್ದಿ

ಜೆಡಿಎಸ್ ಗೆ ಗುಡ್ ಬೈ ಹೇಳಲು ಜೆಡಿಎಸ್ ವಕ್ತಾರ ರಮೇಶ್ ಬಾಬು ಸಿದ್ಧತೆ..?

ಡಿವಿಜಿ ಸುದ್ದಿ, ಬೆಂಗಳೂರು: ಜೆಡಿಎಸ್ ವಕ್ತಾರ, ಎಂಎಲ್ ಸಿ ರಮೇಶ್ ಬಾಬು ಪಕ್ಷ ತೊರೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಜೆಡಿಎಸ್ ಪಕ್ಷದಿಂದ ಪದವಿಧರ ಕ್ಷೇತ್ರದ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು ಸುದ್ದಿ ಕೇಳಿ ಬುರುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ಗುಡ್ ಬೈ ಹೇಳಲು ರಡಿಯಾಗಿದ್ದಾರೆ.

ಸದನದ ಒಳಗೂ ಮತ್ತು ವರೆಗೆ ಜೆಡಿಎಸ್ ಪಕ್ಷವನ್ನು ಸಮರ್ಥಿಸಿಕೊಳ್ಳುತ್ತಿದ್ದ ರಮೇಶ್ ಬಾಬು ಇದೀಗ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು ನಾನು ಜೆಡಿಎಸ್ ಪಕ್ಷದ ನಿಷ್ಟವಂತ ಕಾರ್ಯಕರ್ತ. ನಾನು ಪದವಿಧರ ಕ್ಷೇತ್ರದ ಚುನಾವಣೆ ಸಿದ್ಧತೆಯಲ್ಲಿ ಇರುವಾಗ ಕೆಲವು ಭಾಗದಲ್ಲಿ ನನಗೆ ಟಿಕೆಟ್ ನೀಡುವುದಿಲ್ಲ ಅಂತ ಸುದ್ದಿ ಹರಿಬಿಡಲಾಗಿತ್ತು. ಆದರೆ, ನಾನು ಈಗಲೂ ಜೆಡಿಎಸ್ ಪಕ್ಷದಲ್ಲಿ ಇದ್ದೇನೆ. ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇನೆ. ಪಕ್ಷ ಈಗಲೂ ನನಗೆ ಟಿಕೆಟ್ ಕೊಡುವ ವಿಶ್ವಾಸವಿದೆ ಎಂದಿದ್ದಾರೆ.

ಒಂದು ವೇಳ ಜೆಡಿಎಸ್ ನಿಂದ ಟಿಕೆಟ್ ಕೈ ತಪ್ಪಿದರೆ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹೋಗುವರು ಹೋಗಬಹುದು. ಅವರನ್ನು ಈಗಾಗಲೇ ಕರೆದು ಮಾತನಾಡಿಸಿದ್ದೇನೆ. ಆದರೂ ಪಕ್ಷ ತೊರೆಯುವ ಯೋಚನೆ ಇದ್ದರೆ ಹೋಗಬಹುದು ಎಂದಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top