ಡಿವಿಜಿ ಸುದ್ದಿ, ಬೆಂಗಳೂರು: ಜೆಡಿಎಸ್ ವಕ್ತಾರ, ಎಂಎಲ್ ಸಿ ರಮೇಶ್ ಬಾಬು ಪಕ್ಷ ತೊರೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈಗಾಗಲೇ ಜೆಡಿಎಸ್ ಪಕ್ಷದಿಂದ ಪದವಿಧರ ಕ್ಷೇತ್ರದ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎಂದು ಸುದ್ದಿ ಕೇಳಿ ಬುರುತ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಗೆ ಗುಡ್ ಬೈ ಹೇಳಲು ರಡಿಯಾಗಿದ್ದಾರೆ.
ಸದನದ ಒಳಗೂ ಮತ್ತು ವರೆಗೆ ಜೆಡಿಎಸ್ ಪಕ್ಷವನ್ನು ಸಮರ್ಥಿಸಿಕೊಳ್ಳುತ್ತಿದ್ದ ರಮೇಶ್ ಬಾಬು ಇದೀಗ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದಾರೆ ಅನ್ನೋ ಸುದ್ದಿ ಹರಿದಾಡುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು ನಾನು ಜೆಡಿಎಸ್ ಪಕ್ಷದ ನಿಷ್ಟವಂತ ಕಾರ್ಯಕರ್ತ. ನಾನು ಪದವಿಧರ ಕ್ಷೇತ್ರದ ಚುನಾವಣೆ ಸಿದ್ಧತೆಯಲ್ಲಿ ಇರುವಾಗ ಕೆಲವು ಭಾಗದಲ್ಲಿ ನನಗೆ ಟಿಕೆಟ್ ನೀಡುವುದಿಲ್ಲ ಅಂತ ಸುದ್ದಿ ಹರಿಬಿಡಲಾಗಿತ್ತು. ಆದರೆ, ನಾನು ಈಗಲೂ ಜೆಡಿಎಸ್ ಪಕ್ಷದಲ್ಲಿ ಇದ್ದೇನೆ. ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಉತ್ತಮ ಸಂಬಂಧ ಹೊಂದಿದ್ದೇನೆ. ಪಕ್ಷ ಈಗಲೂ ನನಗೆ ಟಿಕೆಟ್ ಕೊಡುವ ವಿಶ್ವಾಸವಿದೆ ಎಂದಿದ್ದಾರೆ.
ಒಂದು ವೇಳ ಜೆಡಿಎಸ್ ನಿಂದ ಟಿಕೆಟ್ ಕೈ ತಪ್ಪಿದರೆ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತೇನೆ ಎಂದಿದ್ದಾರೆ. ಈ ಮೂಲಕ ಜೆಡಿಎಸ್ ಪಕ್ಷದಿಂದ ಒಂದು ಹೆಜ್ಜೆ ಹೊರಗೆ ಇಟ್ಟಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಹೋಗುವರು ಹೋಗಬಹುದು. ಅವರನ್ನು ಈಗಾಗಲೇ ಕರೆದು ಮಾತನಾಡಿಸಿದ್ದೇನೆ. ಆದರೂ ಪಕ್ಷ ತೊರೆಯುವ ಯೋಚನೆ ಇದ್ದರೆ ಹೋಗಬಹುದು ಎಂದಿದ್ದಾರೆ.



