Connect with us

Dvgsuddi Kannada | online news portal | Kannada news online

ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ: ರೇಣುಕಾಚಾರ್ಯ

ರಾಜಕೀಯ

ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ: ರೇಣುಕಾಚಾರ್ಯ

ಡಿವಿಜಿ ಸುದ್ದಿ, ದಾವಣಗೆರೆ: ಸರ್ಕಾರದಲ್ಲಿ ಡಿಸಿಎಂ ಹುದ್ದೆ ಅವಶ್ಯಕತೆ ಇಲ್ಲ. ಎಲ್ಲಾ ಸಮಾಜಕ್ಕೂ  ಡಿಸಿಎಂ ಸ್ಥಾನ ನೀಡಲು ಸಾಧ್ಯವಿಲ್ಲ. ಸಿಎಂ ಹುದ್ದೆ ಒಂದೇ ಸಾಕು. ಈ ಕೂಡಲೇ  ಡಿಸಿಎಂ ಹುದ್ದೆ ರದ್ದು ಮಾಡಬೇಕೆಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷ ಯಾವುದೇ ಒಂದು ಸಮಾಜಕ್ಕೆ ಸೀಮಿತವಾಗಿಲ್ಲ. ಜಾತಿಗೆ ಒಂದು  ಡಿಸಿಎಂ ಸ್ಥಾನ ನೀಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವರ್ಚಸ್ಸು ಇದೆ. ಹೀಗಾಗಿ ಮುಖ್ಯಮಂತ್ರಿ ಹುದ್ದೆ ಒಂದೇ ಸಾಕು ಎಂದರು.

ಸಚಿವ ಸ್ಥಾನಕ್ಕೆ ಅನೇಕ ಜಿಲ್ಲೆಯಲ್ಲಿ ಆಕಾಂಕ್ಷಿಗಳಿದ್ದಾರೆ . ಅದರಲ್ಲೂ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ನಾನೂ ಕೂಡ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ. ಈ ಬಗ್ಗೆ ಯಾವುದೇ ಬೀದಿ ರಂಪಾಟ ಮಾಡುವುದಿಲ್ಲ. ನಾನು ಕೂಡ 3 ಸಲ ಶಾಸಕರಾಗಿದ್ದೇನೆ. ಮಂತ್ರಿಯಾಗಿದ್ದೇನೆ. ಅನುಭವ ಆಧಾರಿಸಿ ದಾವಣಗೆರೆ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕು ಎಂದು ತಿಳಿಸಿದರು.

ಸಚಿವ ಸಂಪುಟ ವಿಸ್ತರಣೆ ಹೈಕಮಾಂಡ್ ಗೆ ಬಿಟ್ಟ ವಿಚಾರ. ಇನ್ನು ಮೂರುವರೆ ವರ್ಷ ಬಿಜೆಪಿ ಸುಭದ್ರವಾಗಿ  ಅಧಿಕಾರದಲ್ಲಿರುತ್ತದೆ ಎಂದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

ದಾವಣಗೆರೆ

Advertisement
Advertisement Enter ad code here

Title

To Top