Connect with us

Dvgsuddi Kannada | online news portal | Kannada news online

ಶಿರಾ ಉಪ ಚುನಾವಣೆ: ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ

ಪ್ರಮುಖ ಸುದ್ದಿ

ಶಿರಾ ಉಪ ಚುನಾವಣೆ: ಟಿ.ಬಿ. ಜಯಚಂದ್ರ ಕಾಂಗ್ರೆಸ್ ಅಭ್ಯರ್ಥಿ

ಡಿವಿಜಿ ಸುದ್ದಿ, ಬೆಂಗಳೂರು;  ಶಿರಾ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ  ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು,ಮಾಜಿ ಸಚಿವ ಟಿ.ಬಿ ಜಯಚಂದ್ರ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ನಡೆಸಿದ್ದೇವೆ. ಶಿರಾ ಉಪ ಚುನಾವಣೆಯನ್ನು ಪರಮೇಶ್ವರ್ ಅವರ ನೇತೃತ್ವತ್ವದಲ್ಲಿ ನಡೆಸುತ್ತೇವೆ. ಕೆ.ಎನ್.  ರಾಜಣ್ಣ ಆಗಿ ಸಾಥ್ ನೀಡಲಿದ್ದಾರೆ. ಪಕ್ಷದ ಅಭ್ಯರ್ಥಿಯಾಗಿ ಜಯಚಂದ್ರ ಆಯ್ಕೆ ಮಾಡಲಾಗಿದೆ ಎಂದರು.

ರಾಜಣ್ಣನವರೇ ಜಯಚಂದ್ರ ಹೆಸರು ಸೂಚಿಸಿದ್ದಾರೆ. ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ. ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭ ಮಾಡುತ್ತೇವೆ ಎಂದರು. ಈ ಸಭೆಯಲ್ಲಿ ಮಾಜಿ ಸಚಿವ ಟಿ.ಬಿ. ಜಯಚಂದ್ರ, ಕೆ.ಎನ್ ರಾಜಣ್ಣ, ಷಡಾಕ್ಷರಿ, ಚಂದ್ರಪ್ಪ ಅವರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top