ನೀವು ಬೆಂಕಿ ಹಚ್ಚಿದ್ರೆ ನಾವು ನೀರು ಹಾಕಿ ನಂದಿಸುತ್ತೇವೆ: ಕೋಟ ಶ್ರೀನಿವಾಸ ಪೂಜಾರಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಧಾರವಾಡ: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯದಲ್ಲಿ ಬೆಂಕಿ ಬೀಳುತ್ತೆ ಎಂದು ಪ್ರಚೋದನಾತ್ಮ ಹೇಳಿಕೆ ನೀಡಿದ್ದ ಮಾಜಿ ಸಚಿವ ಯು.ಟಿ.  ಖಾದರ್ ತಿರುಗೇಟು ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ನೀವು ಬೆಂಕಿ ಹಚ್ಚಿದ್ರೆ, ನಾವು ನೀರು ಹಾಕಿ ನಂದಿಸುತ್ತೇವೆ ಎಂದಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು,  ಪ್ರಜಾಪ್ರಭುತ್ವದ ದೇಗುಲವಾದ ಸಂಸತ್‍ನಲ್ಲಿ ಪೌರತ್ವ ಕಾಯ್ದೆ ತಿದ್ದುಪಡಿಯಾಗಿ ರೂಪಗೊಂಡಿದೆ. ಬಹುಮತದಿಂದ ತಿದ್ದುಪಡಿ ಮಸೂದೆ ಕಾಯ್ದೆಯಾಗಿ ಜಾರಿಗೆ ಬಂದಿದೆ. ಈ ತಿದ್ದುಪಡಿ ಕಾಯ್ದೆಯನ್ನು ಇಡೀ ರಾಷ್ಟ್ರದ ಜನತೆ ಸ್ವಾಗತಿಸಿದ್ದಾರೆ.  ಆದರೆ ಅಧಿಕಾರ ಕಳೆದುಕೊಂಡ ಕೆಲವರು ರಾಜಕೀಯ ಪ್ರೇರಿತದಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದೆ ಎಂದು  ಕಿಡಿಕಾರಿದರು.

ವರುಣ ದೇವನ ಕೃಪೆಯಿಂದ ಕರ್ನಾಟಕದಲ್ಲಿ ಸಮೃದ್ಧವಾದ ಜಲ ಶಕ್ತಿ ಇದೆ.  ನೀವು ಹಾಕುವ ಬೆಂಕಿಗೆ ನೀರು ಹಾಕುವ ಸಾಮರ್ಥ್ಯ ನಮಗಿದೆ ಎಂದರು.

ಮಠಗಳಿಗೆ 60 ಕೋಟಿ ಹಣ

60 ಕೋಟಿ ಹಣವನ್ನು ಮಠಗಳಿಗೆ ನೀಡುವ ಪ್ರಸ್ತಾಪ ಸರ್ಕಾರದ ಮುಂದಿದೆ. ಯಾವುದೇ ಮಠಗಳನ್ನು ನಿರ್ಲಕ್ಷ್ಯ ಮಾಡುವುದಿಲ್ಲ. ಸರ್ಕಾರ ಹಣ ನೀಡಿದ್ದರೂ ಅದನ್ನು ನಾವು ನ್ಯಾಯ ಸಮ್ಮತವಾಗಿ ತಲುಪಿಸುತ್ತೇವೆ. ಮಠಗಳಿಗೆ ನೀಡುವ ಹಣವನ್ನು ಯಾವ ದೇವಸ್ಥಾನಕ್ಕೆ ನೀಡುತ್ತಿಲ್ಲ ಎಂದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *