15 ಸ್ಥಾನಗಳಲ್ಲಿ ಬಿಜೆಪಿ 8 ಸ್ಥಾನ ಕೂಡ ಗೆಲ್ಲಲು ಸಾಧ್ಯವಿಲ್ಲ : ಸಿದ್ದರಾಮಯ್ಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಮೈಸೂರು ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ 15  ಸ್ಥಾನದಲ್ಲಿ ಕೇಲವ 8 ಸ್ಥಾನ ಕೂಡ ಗೆಲ್ಲಲು ಸಾಧ್ಯವಿಲ್ಲ ಎಂದು ಎಂದು ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಈ ಬಾರಿಯ ಚುನಾವಣೆಯನ್ನು ಅಕ್ರಮ ಮಾಡಲು ಸಜ್ಜಾಗಿದ್ದಾರೆ. ಮೈಸೂರಿನಲ್ಲಿ ಯೋಗೇಶ್ವರ್ ಪೋಟೋ ಇರೋ ಸೀರೆಗಳು ಸಿಕ್ಕಿವೆ. ಇದು ಚುನಾವಣಾ ಅಕ್ರಮ ಅಲ್ಲವೇ..?

ಕೋರ್ಟ್ ತೀರ್ಪು ಬಂದ ಮೇಲೆ ಒಬ್ಬೊಬ್ಬರೇ  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಸತ್ಯ ಬಾಯಿ ಬಿಡುತ್ತಿದ್ದಾರೆ. ಜನರಿಗೆ ಅದು ಈಗ ಅರ್ಥವಾಗಿದೆ. ಅವರು ಏನೇ ಕಥೆ ಹೇಳಿರೂ ಅನರ್ಹತೆ ಪಟ್ಟಿಯಿಂದ ಹೊರ ಬರಲು ಸಾಧ್ಯವಿಲ್ಲ. ಅವರಿಗೆ ಅಂಟಿರುವ ಅನರ್ಹತೆ ಪಟ್ಟ ಹೋಗಿಲ್ಲ. ರಮೇಶ್ ಜಾರಕಿಹೋಳಿಯಂತವರ ಮಾತುಗಳಿಗೆ ಕಿಮ್ಮತ್ತಿಲ್ಲ‌ ಎಂದರು.

ಅನರ್ಹ ಎಲ್ಲಾ ತ್ಯಾಗಿಗಳಲ್ಲ. ಅವರು ಸ್ವಾರ್ಥಿಗಳು. ಅವರೇನು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ್ದಾರಾ. ಅನರ್ಹರನ್ನು ಸಚಿವರಾಗಿ ಮಾಡುವ ಕುರಿತ ಸಿಎಂ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ,ಇದು ಚುನಾವಣೆ ನೀತಿ ಸಂಹಿತೆ ವ್ಯಾಪ್ತಿಗೆ ಬರುವುದಿಲ್ಲವಾ? ಬಿಜೆಪಿಗೆ ಯಾವುದೇ ನೀತಿ ಸಂಹಿತೆ ಅಡ್ಡಿ ಇರುವುದಿಲ್ಲವಾ ಎಂದು ಕಿಡಿಕಾರಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *