ಬಿಜೆಪಿ ಸರ್ಕಾರ ಬೀಳಿಸಲ್ಲ ಅಂತಾ ಹೇಳಿದ ಕುಮಾರಸ್ವಾಮಿಗೆ  ಸಿದ್ದರಾಮಯ್ಯ ಏನು ಟಾಂಗ್ ಕೊಟ್ರೂ ಗೊತ್ತಾ.?

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ ಬೆಂಗಳೂರು: ಬಿಜೆಪಿ ಸರ್ಕಾರ ಉರುಳಿಸಲ್ಲ ಅಂತಾ ನಿನ್ನೆಯಷ್ಟೇ ಹೇಳಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಇವತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದು, ಕುಮಾರ ಸ್ವಾಮಿ ಅವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ ಹೇಳಿ..? ಬಿಜೆಪಿ ಬೆಂಬಲಿಸುವ ಮೂಲಕ ಕೋಮುವಾದಿಗಳನ್ನು ಬೆಂಬಲಿಸಿದ್ದಾರೆ  ಎಂದರು.

ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಕುಮಾರಸ್ವಾಮಿ ಈ ಹಿಂದೆ ಯಡಿಯೂರಪ್ಪ ಜೊತೆ  ಸೇರಿ 2006ರಲ್ಲಿ ಸಮ್ಮಿಶ್ರ  ಸರ್ಕಾರ ರಚಿಸಿದ್ದವರು.  ಇಂಥವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಅವರ ಹೇಳಿಕೆ ಗಮನಿಸಿದ್ದೇನೆ. ಅವರು  ಬಿಜೆಪಿಯನ್ನು ಬೆಂಬಲಿಸುತ್ತಿರುವಂತೆ ಕಾಣುತ್ತಿದೆ. ಈ ಮೂಲಕ  ಕೋಮುವಾದಿಗಳನ್ನು ಅವರು ಬೆಂಬಲಿಸುತ್ತಿದ್ದಾರೆ.

ನಾನು ಬಿಜೆಪಿ ಸರ್ಕಾರವನ್ನು ಉರುಳಿಸುತ್ತೇನೆ ಎಂದು ಹೇಳಿಲ್ಲ. ಆದರೆ, ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ 15 ಸ್ಥಾನಗಳಲ್ಲಿ ಗೆದ್ದರೆ ಬಿಜೆಪಿ ಸರ್ಕಾರ ಉರುಳುತ್ತದೆ. ಆಗ ನಾವು ಚುನಾವಣೆಗೆ ಹೋಗುತ್ತೇವೆ ಎಂದು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ನಿನ್ನೆ ಬೆಳಗಾವಿಯಲ್ಲಿ ಮಾತನಾಡಿದ್ದ  ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಮುಖಂಡರು ಸರ್ಕಾರ ಬೀಳುತ್ತದೆ ಎಂದು ಪದೇಪದೇ ಹೇಳುತ್ತಿದ್ದಾರೆ. ಆದರೆ, ನಾವು ಈ ಸರ್ಕಾರ ಬೀಳಿಸುವ ಪ್ರಯತ್ನ ಮಾಡಲ್ಲ ಆ ಆತುರವೂ ನನಗಿಲ್ಲ ಎಂದಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *