ಡಿವಿಜಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸರ್ಕಾರದ ನೂರು ದಿನ ಸಂಭ್ರಮದಲ್ಲಿ ಅದ್ಭುತ ವಿಡಿಯೋ ಮೂಲಕ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ಅವರಿಗೆ ರಾಜ್ಯದ ಜನ ಪರವಾಗಿ ಕೃತಜ್ಞತೆ ಸಲ್ಲಿಸಬೇಕು ಎಂದು ಸರಣಿ ಟ್ವಿಟ್ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ @BSYBJP ಅವರು ತಮ್ಮ ಸರ್ಕಾರದ ನೂರು ದಿನಗಳನ್ನು ಒಂದು ಅದ್ಭುತ ವಿಡಿಯೋ ಪ್ರಸಾರದ ಮೂಲಕ ಆಚರಿಸಿದ್ದಾರೆ. ಈ ಮೂಲಕ ತಾವು ನಡೆಸಿದ್ದ ಆಪರೇಷನ್ ಕಮಲಕ್ಕೆ ಸಾಕ್ಷ್ಯ ಒದಗಿಸಿದ್ದಾರೆ. ರಾಜ್ಯದ ಜನ ಅವರಿಗೆ ಕೃತಜ್ಞತೆ ಸಲ್ಲಿಸಬೇಕು. @INCKarnataka#ResignBSYShah
— Siddaramaiah (@siddaramaiah) November 2, 2019
ಈ ವಿಡಿಯೋ ಮೂಲಕ ಅನರ್ಹ ಶಾಸಕರ ಬೆಂಬಲಕ್ಕೆ ಕೇಂದ್ರ ಸಚಿವ ಅಮಿತ್ ಶಾ ಇದ್ದಾರೆ. ಎಂಬ ಸತ್ಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿದ್ದರೆ. ಅಪರೇಷನ್ ಕಲಮದ ಬಗ್ಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ ದೂರು ನೀಡುವುದಾಗಿಯೂ ತಿಳಿಸಿದ್ದಾರೆ.
ಸನ್ಮಾನ್ಯ ರಾಜ್ಯಪಾಲರನ್ನು ಪಕ್ಷದ ನಾಯಕರ ಜೊತೆ ಭೇಟಿ ಮಾಡಿ, "ಅಪರೇಷನ್ ಕಮಲ" ದಲ್ಲಿ ಭಾಗಿಯಾಗಿರುವ ರಾಜ್ಯ ಬಿಜೆಪಿ ಸರ್ಕಾರವನ್ನು ವಜಾಗೊಳಿಸಬೇಕು ಹಾಗೂ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಮೇಲೆ ಕ್ರಮ ಕೈಗೊಳ್ಳಲು ರಾಷ್ಟ್ರಪತಿಗಳಿಗೆ ಶಿಫಾರಸ್ಸು ಮಾಡಬೇಕೆಂದು ಆಗ್ರಹಿಸಿದೆವು.#ResignBSYShah
— Siddaramaiah (@siddaramaiah) November 2, 2019
ಅನರ್ಹ ಶಾಸಕರಿಗೂ ನಮಗೂ ಸಂಬಂಧವಿಲ್ಲ ಎನ್ನುತ್ತಿದ್ದ ಯಡಿಯೂರಪ್ಪ, ಈಗ ಆಪರೇಷನ್ ಕಮಲ, ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.
ನಮ್ಮ ಪಕ್ಷದ ಶಾಸಕರಿಗೆ ಆಮಿಷ ತೋರಿಸಿ ಮುಂಬೈನ ಹೊಟೇಲ್ನಲ್ಲಿಟ್ಟು ಸರ್ಕಾರದ ಪತನಕ್ಕೆ ನೇರ ಕಾರಣರಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಭಾಗಿಯಾಗಿದ್ದಾರೆ. ಇದನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ. ರಾಜ್ಯಪಾಲರನ್ನು ಭೇಟಿಮಾಡಿ, ಯಡಿಯೂರಪ್ಪನವರ ರಾಜೀನಾಮೆ ಪಡೆಯುವಂತೆ ಮನವಿ ಸಲ್ಲಿಸಲಿದ್ದೇವೆ . ಇದಲ್ಲದೆ ರಾಷ್ಟ್ರಪತಿ ಅವರನ್ನೂ ಭೇಟಿ ಮಾಡಿ,ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ ಎಂದಿದ್ದಾರೆ.
ನಮ್ಮ ಪಕ್ಷದ ವತಿಯಿಂದ ರಾಜ್ಯಪಾಲರನ್ನು ಭೇಟಿಮಾಡಿ, ಯಡಿಯೂರಪ್ಪನವರ ರಾಜೀನಾಮೆ ಪಡೆಯುವಂತೆ ಮನವಿ ಪತ್ರ ನೀಡಲಿದ್ದೇವೆ. ರಾಷ್ಟ್ರಪತಿಯವರನ್ನೂ ಭೇಟಿ ಮಾಡಿ, ಆಪರೇಷನ್ ಕಮಲದಲ್ಲಿ ಭಾಗಿಯಾದ ಕೇಂದ್ರ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತೇವೆ. @INCKarnataka #ResignBSYShah
— Siddaramaiah (@siddaramaiah) November 2, 2019
ಆಪರೇಷನ್ ಕಮಲದ ಹೆಸರಿನಲ್ಲಿ ಸಂವಿಧಾನದ ಕಗ್ಗೊಲೆಯಾಗುತ್ತಿದೆ. ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರು ನೇರವಾಗಿ ಈ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಪುರಾವೆ ಸಿಕ್ಕಿದೆ. ಆದ ಕಾರಣ ಇದನ್ನು ಇಲ್ಲಿಗೆ ಕೈಬಿಡುವ ಪ್ರಶ್ನೆಯೇ ಇಲ್ಲ. ಇದನ್ನು ಸುಪ್ರೀಮ್ ಕೋರ್ಟ್ನ ಗಮನಕ್ಕೆ ತಂದು ನ್ಯಾಯ ಕೇಳ್ತೇವೆ. @INCKarnataka #ResignBSYShah
— Siddaramaiah (@siddaramaiah) November 2, 2019
ಶಾಸಕರ ರಾಜೀನಾಮೆಗೂ ಬಿಜೆಪಿಗೂ ಸಂಬಂಧ ಇಲ್ಲ ಎನ್ನುತ್ತಿದ್ದ @BSYBJP,
ಈಗ ಆಪರೇಷನ್ ಕಮಲ ಅಮಿತ್ ಶಾ ನಿರ್ದೇಶನದಲ್ಲಿಯೇ ನಡೆದಿತ್ತು ಎಂಬ ಸತ್ಯವನ್ನು ವೀಡಿಯೋದಲ್ಲಿ ಹೇಳಿದ್ದಾರೆ. ಇಂತಹ ಗೃಹಸಚಿವರಿಗೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆ ಇದೆಯೇ? @INCKarnataka #ResignBSYShah— Siddaramaiah (@siddaramaiah) November 2, 2019



