Connect with us

Dvgsuddi Kannada | online news portal | Kannada news online

ಮಾನಸಿಕ ಅಸ್ವಸ್ಥನೆಂದು ಪ್ರಕರಣ ಮುಚ್ಚಿ ಹಾಕಬಾರದು: ಮಾಜಿ ಸಿಎಂ ಸಿದ್ದರಾಮಯ್ಯ

ಪ್ರಮುಖ ಸುದ್ದಿ

ಮಾನಸಿಕ ಅಸ್ವಸ್ಥನೆಂದು ಪ್ರಕರಣ ಮುಚ್ಚಿ ಹಾಕಬಾರದು: ಮಾಜಿ ಸಿಎಂ ಸಿದ್ದರಾಮಯ್ಯ

 ಡಿವಿಜಿ ಸುದ್ದಿ, ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಆದಿತ್ಯರಾವ್  ಬಗ್ಗೆ ನಿಷ್ಪಕ್ಷಪಾತ ತನಿಖೆ  ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು. ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ  ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಿರ್ದಿಷ್ಟ ಸಮುದಾಯದ ಬಗ್ಗೆ ಪೂರ್ವಗ್ರಹ ಹೊಂದಿರುವ ಸಂಘ ಪರಿವಾರದ ನಾಯಕರು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೂ ಕೋಮು ಬಣ್ಣ ಬಳಿಯುತ್ತಿದ್ದಾರೆ. ಇದರಿಂದ ಅಲ್ಲಿನ ಶಾಂತಿ ವ್ಯವಸ್ಥೆ ಕದಡಲು ಕಾರಣ. ತಮ್ಮ ಅಜೆಂಡಾಕ್ಕೆ ಬಳಸಲಾಗದ ಪ್ರಕರಣಗಳ ಬಗ್ಗೆ ಅವರ ಮೌನವೇ ಅವರ ದುರುದ್ದೇಶಕ್ಕೆ ಸಾಕ್ಷಿ ಎಂದು ಮಾಜಿ ಸಿಎಂ ಹರಿಹಾಯ್ದಿದ್ದಾರೆ.

ಪೊಲೀಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಲು ಹೋಗದೆ ವೃತ್ತಿಪರತೆಯಿಂದ‌ ಕೆಲಸ ಮಾಡಬೇಕು. ಮಂಗಳೂರು ಪೊಲೀಸರು ತಮ್ಮ ತಪ್ಪುಗಳನ್ನು‌ ಮುಚ್ಚಿಕೊಳ್ಳಲು ಅನಗತ್ಯವಾಗಿ ಸಾರ್ವಜನಿಕರಲ್ಲಿ‌ ಗೊಂದಲ‌ ಸೃಷ್ಟಿಸಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲು ಕಾರಣವಾಗುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top