ಡಿವಿಜಿ ಸುದ್ದಿ, ದಾವಣಗೆರೆ: ನಗರದ ಎಂಸಿಸಿಬಿ ಫೀಡರ್ ನಲ್ಲಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ (ಸೆ.07) ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಂ.ಸಿ.ಸಿ.ಬಿ ಬ್ಲಾಕ್ ವ್ಯಾಪ್ತಿಯ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ 1ನೇ ಅಡ್ಡರಸ್ತೆ ಯಿಂದ 7ನೇ ಅಡ್ಡರಸ್ತೆಯವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿ.ಐ.ಇ.ಟಿ. ಕಾಲೇಜು, ಗುಂಡಿ ಛತ್ರದ ಸುತ್ತ ಮುತ್ತ, ಸದ್ಯೋಜಾತ ಮಠದ ಕಾಸಲ್ಶೆಟ್ಟಿ ಪಾರ್ಕ್, ಶಾಮನೂರು ಶಿವಶಂಕರಪ್ಪರವರ ನಿವಾಸದ ಸುತ್ತ ಮುತ್ತ ಪ್ರದೇಶಗಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



