Connect with us

Dvgsuddi Kannada | online news portal | Kannada news online

ಪ್ರಣಬ್ ಮುಖರ್ಜಿ  ಆರ್ ಎಸ್ ಎಸ್ ‌ ಕಾರ್ಯಾಗಾರಕ್ಕೆ ಹೋಗಿದ್ದು ಕೊನೆಗೂ ತಿಳಿಯಲಿಲ್ಲ: ಖರ್ಗೆ

ರಾಜಕೀಯ

ಪ್ರಣಬ್ ಮುಖರ್ಜಿ  ಆರ್ ಎಸ್ ಎಸ್ ‌ ಕಾರ್ಯಾಗಾರಕ್ಕೆ ಹೋಗಿದ್ದು ಕೊನೆಗೂ ತಿಳಿಯಲಿಲ್ಲ: ಖರ್ಗೆ

ಡಿವಿಜಿ ಸುದ್ದಿ, ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಹಲವು ಹುದ್ದೆಗಳೂ ಸೇರಿದಂತೆ ರಾಷ್ಟ್ರಪತಿ ಸ್ಥಾನ ಅಲಂಕರಿಸಿದ್ದ ಪ್ರಣಬ್ ಮುಖರ್ಜಿ ಅವರು,  ಕೊನೆಗೆ ಆರ್‌ಎಸ್‌ಎಸ್‌ ಕಾರ್ಯಾಗಾರದಲ್ಲಿ ಪಾಲ್ಗೊಂಡಿದ್ದು ಯಾಕೆ ಎನ್ನುವುದು ಕೊನೆಗೂ ನಿಗೂಢವಾಯಿತು ಎಂದು ರಾಜ್ಯಸಭೆ ಕಾಂಗ್ರೆಸ್‌ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಣಬ್‌ ಮುಖರ್ಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ಮುಖರ್ಜಿ ಇಂದಿರಾ ಗಾಂಧಿಯವರ ತತ್ವದ ಮೇಲೆ ನಂಬಿಕೆ ಹೊಂದಿದವರು.  ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಹೋಗಿದ್ದು ಯಾಕೆ ಎಂಬುದು ತಿಳಿಯಲಿಲ್ಲ ಎಂದರು.

mallikarjun kharge

ಈ  ಬಗ್ಗೆ ಅವರ ಜೊತೆ ನಾನು ಮಾತನಾಡಬೇಕಿತ್ತು. ಆದರೆ, ಕೊನೆಗೂ ಸಾಧ್ಯವಾಗಲಿಲ್ಲಕಾಂಗ್ರೆಸ್ ಪಕ್ಷವನ್ನು ಪ್ರಣಬ್ ಎತ್ತರಕ್ಕೇರಿಸಿದವರು. ಪ್ರಣಬ್ ಮುಖರ್ಜಿ ದೊಡ್ಡ ವಿಚಾರವಾದಿ. ಅವರ ನಿಧನ ತುಂಬಲಾರದ ನಷ್ಟ ಎಂದು ತಿಳಿಸಿದರು.

ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಮಾತನಾಡಿ, ಪ್ರಣಬ್ ಮುಖರ್ಜಿ ಅವರು ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಹೋಗುವ ಮೊದಲು ನಾನು ಭೇಟಿಯಾಗಿದ್ದೆ, ಇಲ್ಲಿಯವರೆಗೆ ನೀವು ಪಕ್ಷ ಬೆಳೆಸಿದ್ದೀರಿ. ಈಗ ಆರ್ ಎಸ್ ಎಸ್  ‌ ಕಾರ್ಯಾಗಾರಕ್ಕೆ  ಹೋಗುತ್ತಿದ್ದೀರಿ, ನಿಮ್ಮ  ಹೆಸರಿಗೆ ಕಳಂಕ ಬರುವುದಿಲ್ಲವೇ ಎಂದಿದ್ದೆ. ಸಂದರ್ಭ ಬಂದಾಗ ಒಪ್ಪಿಕೊಳ್ಳಬೇಕಾಗುತ್ತದೆ ಎಂದಿದ್ದರು.

ಈ ಸಂದರ್ಭದಲ್ಲಿ ವಿಪಕ್ಷ  ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಬಿ.ಎಲ್. ಶಂಕರ್, ವಿ.ಆರ್. ಸುದರ್ಶನ್, ಬಿ.ಎನ್‌. ಚಂದ್ರಪ್ಪ ಉಪಸ್ಥಿತರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜಕೀಯ

To Top