Connect with us

Dvgsuddi Kannada | online news portal | Kannada news online

ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್: ಸರ್ಕಾರಿ ಜಾಗದಲ್ಲಿ ಕಟ್ಟಿರೋ ಮನೆ  ಸಕ್ರಮ, 10 ಸಾವಿರ ಕುಟುಂಬಕ್ಕೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ

ಪ್ರಮುಖ ಸುದ್ದಿ

ರಾಜ್ಯ ಸರ್ಕಾರದಿಂದ ಭರ್ಜರಿ ಗಿಫ್ಟ್: ಸರ್ಕಾರಿ ಜಾಗದಲ್ಲಿ ಕಟ್ಟಿರೋ ಮನೆ  ಸಕ್ರಮ, 10 ಸಾವಿರ ಕುಟುಂಬಕ್ಕೆ ಹಕ್ಕುಪತ್ರ ವಿತರಣೆಗೆ ಸಿದ್ಧತೆ

ಡಿವಿಜಿ ಸುದ್ದಿ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ  ಜಿಲ್ಲೆಯಲ್ಲಿ ಸರ್ಕಾರಿ ಜಾಗದಲ್ಲಿಕಟ್ಟಿರೋ ಮನೆ  ಸಕ್ರಮ ಮಾಡಿಕೊಳ್ಳಲು ರಾಜ್ಯ ಸರ್ಕಾರ ಭರ್ಜರಿ ಆಫರ್ ನೀಡಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್, ಅಕ್ರಮ ಮನೆಗಳನ್ನು ಸಕ್ರಮ ಮಾಡಿಕೊಳ್ಳುವ ಯೋಜನೆ ರಾಜ್ಯದಾದ್ಯಂತ ಜಾರಿಯಲ್ಲಿದ್ದು, ಮೊದಲ ಹಂತವಾಗಿ ಜನವರಿ 28 ರಂದು ಸಿಎಂ ಯಡಿಯೂರಪ್ಪ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದ್ದಾರೆ ಎಂದರು.

 

ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡಿರುವ ಬಡವರ ಹೆಸರಿಗೆ ಸೈಟು ನೋಂದಣಿ ಮಾಡಿಸಿಕೊಡೋದು ಸರ್ಕಾರದ ನಿರ್ಧರಿಸಿದೆ.   ಬೆಂಗಳೂರು ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜನವರಿ 28ರಂದು ಮುಖ್ಯಮಂತ್ರಿ ಯಡಿಯೂರಪ್ಪ ಹಕ್ಕುಪತ್ರ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದಾರೆ ಎಂದರು ತಿಳಿಸಿದರು.

2012 ಜನವರಿ 1ರೊಳಗೆ ಸರ್ಕಾರಿ ಜಾಗದಲ್ಲಿ ಕಟ್ಟಿರುವ 20*30, 30*40 ಅಳತೆಯಲ್ಲಿ ಕಟ್ಟಿರುವ ಮನೆಗಳಿಗೆ ಮಾತ್ರ ನಿವೇಶನ ಹಕ್ಕುಪತ್ರ ನೀಡಲಾಗುತ್ತದೆ. ಈಗಾಗಲೇ ಅರ್ಜಿ ಸಲ್ಲಿಸಿ ಪರಿಶೀಲನೆ ನಡೆದ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು.

ರಾಜ್ಯದಲ್ಲಿ ಸಕ್ರಮಕ್ಕೆ 2.53 ಲಕ್ಷ ಅರ್ಜಿ ಬಂದಿದ್ದು, ಅದರಲ್ಲಿ 6,061 ಅರ್ಜಿಗಳಿಗೆ ಮಂಜೂರಾತಿ ಸಿಕ್ಕಿದೆ. ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲೇ 10 ಸಾವಿರ ಫಲಾನುಭವಿಗಳಿಗೆ ಮಂಜೂರಾತಿ. ಅಲ್ಲದೆ 1,47,465 ಅರ್ಜಿಗಳು ತಿರಸ್ಕೃತವಾಗಿದ್ದು, 45,546 ಅರ್ಜಿಗಳು ಇನ್ನೂ ಬಾಕಿ ಇವೆ. ಬೆಂಗಳೂರು ನಗರದಲ್ಲಿ 20*30 ಅಳತೆಯ ಮನೆಗಳಿಗೆ ಹಕ್ಕುಪತ್ರ ಪಡೆಯಲು ಎಸ್ ಸಿ, ಎಸ್ ಟಿ ವರ್ಗಕ್ಕೆ 2,500 ರೂಪಾಯಿ, ಸಾಮಾನ್ಯ ವರ್ಗಕ್ಕೆ 5 ಸಾವಿರ ರೂಪಾಯಿ, 30*40 ಅಳತೆಯ ಮನೆಗಳಿಗೆ ಹಕ್ಕುಪತ್ರ ಪಡೆಯಲು ಎಸ್ ಸಿ, ಎಸ್ ಟಿ ವರ್ಗಕ್ಕೆ 5 ಸಾವಿರ ರೂಪಾಯಿ ಸಾಮಾನ್ಯ ವರ್ಗಕ್ಕೆ 10 ಸಾವಿರ ರೂಪಾಯಿ ಶುಲ್ಕ ಪಾವತಿಸಬೇಕು.

 

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top