ಗಾಳಿ ಮಳೆಗೆ ನೀರುಪಾಲಾದ ಭತ್ತದ ಬೆಳೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ,ದಾವಣಗೆರೆ: ಕಳೆದ ರಾತ್ರಿ ಸುರಿದ ಗಾಳಿ ಮಳೆಗೆ ತಾಲ್ಲೂಕಿನ ಹಲವೆಡೆ ಭತ್ತದ ಗದ್ದೆಗಳು ನೀರುಪಾಲಾಗಿವೆ. ತಾಲೂಕಿನ ಆವರಗೊಳ್ಳ, ಕಡ್ಲೇಬಾಳು,ಕಕ್ಕರಗೊಳ್ಳ, ಬೇತೂರು, ಕಾಡಜ್ಜಿ, ಮಾಗಾನಹಳ್ಳಿ, ಬೂದಾಳು  ಸೇರಿದಂತೆ ಹಲವು ಗ್ರಾಮಗಳಲ್ಲಿ ಜಮೀನುಗಳಲ್ಲಿ ನೀರು ನಿಂತಿದೆ.

ಸುಮಾರು ೫೦೦ ರಿಂದ ೬೦೦ ಎಕರೆಯಲ್ಲಿ ಬೆಳೆಯಲಾಗಿದ್ದ ಭತ್ತ ನೀರಿನಲ್ಲಿ ಕೊಚ್ಚಿಹೋಗಿದೆ. ರೈತರು ಕಷ್ಟಪಟ್ಟು ಬೆಳೆದ ಬೆಳೆ ಸಂಪೂರ್ಣ ನೀರುಪಾಲಾಗಿದೆ. ಕಳೆದ ವರ್ಷ ತೀವ್ರ ಬರಗಾಲದಿಂದ ಕಂಗೆಟ್ಟು ಹೋಗಿದ್ದ ರೈತರು ಈ ಬಾರಿ ಬಂದ ಮಳೆಗೆ ಸಂತಸಗೊಂಡಿದ್ದರು. ಆದರೆ ತಡವಾಗಿ ಬಂದ ಮಳೆ ಅವಾಂತರವನ್ನೇ ಸೃಷ್ಠಿಸಿರುವುದು ರೈತರಿಗೆ ನೋವುಂಟುಮಾಡಿದೆ.

ಭತ್ತದ ಬೆಳೆ ಈಗಾಗಲೇ ಕಟಾವಿಗೆ ಬಂದಿದ್ದು ಇನ್ನೆರಡು ಮೂರುದಿನಗಳಲ್ಲಿ ರೈತರು ಭತ್ತದ ಕಟಾವಿಗೆ ಸಜ್ಜಾಗುತ್ತಿದ್ದರ.  ಆದರೆ ನಿನ್ನೆ ರಾತ್ರಿಯ ಅಕಾಲಿಕ ಮಳೆಯಿಂದಾಗಿ ಕಷ್ಟಪಟ್ಟು ಬೆಳೆದ ಬೆಳೆ ನೆಲ ಸಮವಾಗಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *