ಚಿಕ್ಕಮಗಳೂರಲ್ಲಿ ಮಳೆ ಅಬ್ಬರ: ಚಾರ್ಮಾಡಿ ಘಾಟ್, ಶೃಂಗೇರಿ –ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದ್ದಿ, ಚಿಕ್ಕಮಗಳೂರು : ಕಾಫಿನಾಡು ಚಿಕ್ಕಮಗಳೂರು ಮಳೆಯ  ಆರ್ಭಟ ಮುಂದುವರೆದಿದ್ದು,  ಸುಮಾರು ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದ ಕಾಫಿನಾಡಿನ ಹಲವೆಡೆ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಭಾರೀ ಮಳೆಯಿಂದ ಗುಡ್ಡ ಕುಸಿದು, ಚಾರ್ಮಾಡಿ ಘಾಟ್​,  ಶೃಂಗೇರಿ-ಮಂಗಳೂರು  ಸಂಪರ್ಕ ಕಲ್ಪಿಸುವ ಹೆದ್ದಾರಿ ಬಂದ್ ಆಗಿದೆ.

ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್​ನಲ್ಲಿ  ಭಾರೀ ಮಳೆಗೆ ಭೂ ಕುಸಿತ ಉಂಟಾಗಿದೆ. ಇದರಿಂದ ದಕ್ಷಿಣ ಕನ್ನಡ- ಚಿಕ್ಕಮಗಳೂರು ಜಿಲ್ಲೆಯ ಸಂಪರ್ಕ ರಸ್ತೆ ಬಂದ್ ಆಗಿದೆ. ರಸ್ತೆಗೆ ಬಿದ್ದಿರುವ ಭಾರೀ ಗಾತ್ರದ ಬಂಡೆ-ಮರ-ಮಣ್ಣಿನಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಚಾರ್ಮಾಡಿ ಘಾಟ್ ಅಲೇಕಾನ್ ಬಳಿ ಘಟನೆ ನಡೆದಿದೆ.ಮಣ್ಣು ತೆರೆವು ಕಾರ್ಯದಲ್ಲಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿಗಳು ನಿರತರಾಗಿದ್ದಾರೆ. ಎರಡು ಜೆಸಿಬಿ ಯಂತ್ರಗಳನ್ನು ಬಳಸಿ ತೆರವು ಕಾರ್ಯ ನಡೆಸಲಾಗುತ್ತಿದೆ.

chikkamagaluru rain 2

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮಂಗಳೂರು ರಸ್ತೆ ಸಂಪರ್ಕ ಬಂದ್ ಆಗಿದ್ದು, ಶೃಂಗೇರಿಯ ಗಾಂಧಿ ಮೈದಾನ ಜಲಾವೃತವಾಗಿದೆ. ಕಪ್ಪೆ ಶಂಕರ ದೇವಾಲಯ ಕೂಡ ಮುಳುಗಡೆಯಾಗಿದೆ. ಹಾಗೇ, ಬಾಳೆಹೊನ್ನೂರು ಪಟ್ಟಣದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭದ್ರಾ ನದಿಯಿಂದ ಬಾಳೆಹೊನ್ನೂರಿನ ಸಂತೆ ಮೈದಾನದ ಕಟ್ಟಡಗಳು, ಮಳಿಗೆಗಳು ಜಲಾವೃತವಾಗಿವೆ. ಇದರಿಂದ ಬಾಳೆಹೊನ್ನೂರು-ಕಳಸ ಸಂಪರ್ಕ ಕಡಿತಗೊಂಡಿದೆ. ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್. ಪುರ ಭಾಗದಲ್ಲಿಯೂ ಭಾರೀ ಮಳೆ ಬೀಳುತ್ತಿದೆ.

ಚಿಕ್ಕಮಗಳೂರಿನಲ್ಲಿ ಸುರಿದ ಭಾರೀ ಮಳೆಗೆ ಎರಡೇ ದಿನದಲ್ಲಿ ಇಬ್ಬರು ಬಲಿಯಾಗಿದ್ದಾರೆ. ನಿನ್ನೆ ರಾತ್ರಿ ಗದ್ದೆಯಲ್ಲಿ ಹೋಗುವಾಗ ಕಾಲು ಜಾರಿ ಬಿದ್ದು ಚಿಕ್ಕಮಗಳೂರು ತಾಲೂಕಿನ ಅಂಡವಾನೆ ಗ್ರಾಮದ 40 ವರ್ಷ ಶಂಕರ ಎಂಬುವವರು ಸಾವನ್ನಪ್ಪಿದ್ದಾರೆ. ಭದ್ರಾ ಹಿನ್ನೀರು ಗದ್ದೆಗಳಿಗೆ ನುಗ್ಗಿದ್ದರಿಂದ ಅವಘಡ ಸಂಭವಿಸಿದೆ. ಬಾಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗಿದೆ. ಉಕ್ಕಿ ಹರಿಯುತ್ತಿರುವ ತುಂಗಾ ನದಿಯಿಂದ ರಸ್ತೆಯಲ್ಲಿದ್ದ ಕಾರು ಮುಳುಗಡೆಯಾಗಿದೆ. ನದಿಪಕ್ಕದಲ್ಲಿರುವ ಮನೆಗಳಿಗೂ ನೀರು ನುಗ್ಗುತ್ತಿದೆ. ಭಾರೀ ಮಳೆ-ಗಾಳಿಗೆ ಮಲೆನಾಡಿನ ಜನ ಜೀವನ ಅಸ್ತವ್ಯಸ್ತವಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *