ಡಿವಿಜಿಸುದ್ದಿ.ಕಾಂ, ದಾವಣಗೆರೆ: ವಿಧಾನಸಭಾ ಕಲಾಪಕ್ಕೆ ಮಾಧ್ಯಮಗಳ ವಿಡಿಯೋ ಮತ್ತು ಫೋಟೋ ಕ್ಯಾಮೆರಾ ನಿಷೇಧಿಸಿದ ಸರ್ಕಾರದ ನಿರ್ಧಾರವನ್ನು ಸಿ.ಎಂ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಿಧಾಸಭಾ ಅಧ್ಯಕ್ಷರ ನಿರ್ಧಾರವನ್ನು ಯಾರು ಪ್ರಶ್ನೆ ಮಾಡುವಂತಿಲ್ಲ. ಈಗಾಗಲೇ ಲೋಕಸಭಾ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಕಪಾಲದ ವೇಳೆ ವಿಡಿಯೋ ಮತ್ತು ಫೋಟೋ ತಗೆಯುವುದಕ್ಕೆ ನಿಷೇಧ ಹೇರಲಾಗಿದೆ. ಇದೇ ಮದರಿಯಲ್ಲಿ ಸ್ಫೀಕರ್ ನಿರ್ಧಾರ ತೆಗೆದುಕೊಂಡಿದ್ದಾರೆ. ಕೇವಲ ಕ್ಯಾಮೆರಾಗಳಿಗೆ ಮಾತ್ರ ನಿಷೇಧ ಹೇರಲಾಗಿದ್ದು, ವರದಿಗಾರಿಗೆ ನಿಷೇಧ ಹೇರಿಲ್ಲ ಎಂದರು.
ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ನೀಡಬೇಕು ಎಂದು ರಾಜನಹಳ್ಳಿಯ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತಗೆದುಕೊಳ್ಳಲಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.



