Connect with us

Dvgsuddi Kannada | online news portal | Kannada news online

ಕಲಾಪಕ್ಕೆ ಕ್ಯಾಮೆರಾ ನಿಷೇಧ ಸಮರ್ಥಿಸಿಕೊಂಡ ರೇಣುಕಾಚಾರ್ಯ

ದಾವಣಗೆರೆ

ಕಲಾಪಕ್ಕೆ ಕ್ಯಾಮೆರಾ ನಿಷೇಧ ಸಮರ್ಥಿಸಿಕೊಂಡ ರೇಣುಕಾಚಾರ್ಯ

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ವಿಧಾನಸಭಾ ಕಲಾಪಕ್ಕೆ ಮಾಧ್ಯಮಗಳ ವಿಡಿಯೋ ಮತ್ತು ಫೋಟೋ ಕ್ಯಾಮೆರಾ ನಿಷೇಧಿಸಿದ ಸರ್ಕಾರದ ನಿರ್ಧಾರವನ್ನು ಸಿ.ಎಂ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸಮರ್ಥಿಸಿಕೊಂಡಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವಿಧಾಸಭಾ ಅಧ್ಯಕ್ಷರ ನಿರ್ಧಾರವನ್ನು  ಯಾರು ಪ್ರಶ್ನೆ ಮಾಡುವಂತಿಲ್ಲ. ಈಗಾಗಲೇ ಲೋಕಸಭಾ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ  ಕಪಾಲದ ವೇಳೆ ವಿಡಿಯೋ ಮತ್ತು ಫೋಟೋ ತಗೆಯುವುದಕ್ಕೆ ನಿಷೇಧ ಹೇರಲಾಗಿದೆ. ಇದೇ ಮದರಿಯಲ್ಲಿ ಸ್ಫೀಕರ್ ನಿರ್ಧಾರ ತೆಗೆದುಕೊಂಡಿದ್ದಾರೆ. ಕೇವಲ ಕ್ಯಾಮೆರಾಗಳಿಗೆ ಮಾತ್ರ ನಿಷೇಧ ಹೇರಲಾಗಿದ್ದು, ವರದಿಗಾರಿಗೆ ನಿಷೇಧ ಹೇರಿಲ್ಲ ಎಂದರು.

ವಾಲ್ಮೀಕಿ ಸಮುದಾಯಕ್ಕೆ ಶೇ. 7.5 ಮೀಸಲಾತಿ ನೀಡಬೇಕು ಎಂದು ರಾಜನಹಳ್ಳಿಯ ಶ್ರೀಗಳ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಗಿತ್ತು. ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲ ನೀಡಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತಗೆದುಕೊಳ್ಳಲಿದ್ದಾರೆ.  ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

 

 

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top