ಆಗಸ್ಟ್ ನಲ್ಲಿ ಶಾಲೆ ಪ್ರಾರಂಭಿಸುವ ಕೇಂದ್ರದ ಕ್ರಮಕ್ಕೆ ಶಿಕ್ಷಕರ ಸಂಘ ಸ್ವಾಗತ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ಆಗಸ್ಟ್ 15ರ ಬಳಿಕೆ ಶಾಲೆ, ಕಾಲೇಜ್ ತೆರೆಯಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಸಚಿವರು  ಹೇಳಿದ ಹಿನ್ನೆಲೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೇಂದ್ರದ ಕ್ರಮವನ್ನು ಸ್ವಾಗತಿಸಿದೆ.

ಶಾಲೆ ಆರಂಭಿಸುವ ವಿಷಯದಲ್ಲಿ ರಾಜ್ಯ ಸರ್ಕಾ ತೋರಿಸುತ್ತಿರುವ ಅವಸರಕ್ಕೆ  ಕೇಂದ್ರ ಮಾನವಸಂಪನ್ಮೂಲ ಇಲಾಖೆ ಕಡಿವಾಣ ಹಾಕಿದೆ. ಆಗಸ್ಟ್ 15ಕ್ಕೆ ಮೊದಲು ಶಾಲೆಗಳ ಆರಂಭ ಸಾಧ್ಯವಿಲ್ಲ ಎಂದು ಸ್ಪಷ್ಟವಾಗಿ ಮಾನವಸಂಪನ್ಮೂಲ ಖಾತೆ ಸಚಿವ ರಮೇಶ ಪೋಖ್ರಿಯಾಲ್ ತಿಳಿಸಿದ್ದಾರೆ.

ಈಗ  ಪರೀಕ್ಷೆ ನಡೆಯುತ್ತಿವೆ. ಅವುಗಳ  ಫಲಿತಾಂಶ ಬರುವ ಹೊತ್ತಿಗೆ ಆಗಸ್ಟ್ ಬೇಕಾಗುತ್ತದೆ. ಸೆಪ್ಟಂಬರ್ ಮೊದಲ ವಾರಕ್ಕೆ ಹೋದರೂ ಆಶ್ಚರ್ಯವಿಲ್ಲ. ಶಾಲೆಗಳ ಆರಂಭಕ್ಕೆ ಯಾವುದೇ ಅವಸರವಿಲ್ಲ ಎಂದು ತಿಳಿಸಿದೆ.

ಕರ್ನಾಟಕದಲ್ಲಿ ಜುಲೈ 1ರಿಂದಲೇ ಶಾಲೆಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿತ್ತು. ಆದರೆ ಇದಕ್ಕೆ ಪಾಲಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮತ್ತು ಮಕ್ಕಳ ಶಾಲೆಗಿಂತ ಅವರ ಆರೋಗ್ಯ ಮುಖ್ಯ ಎನ್ನುವ ಸಂದೇಶವನ್ನು ಪಾಲಕರು ಹೊರಹಾಕಿದ್ದರಿಂದ ಸದ್ಯಕ್ಕೆ ಕರ್ನಾಟಕದಲ್ಲಿ ಶಾಲೆಗಳ ಆರಂಭದ ಕುರಿತು ಸ್ಪಷ್ಟ ನಿರ್ಧಾರಕ್ಕೆ ಬರಲಾಗಿಲ್ಲ. ಶಿಕ್ಷಕರನ್ನು ಈಗಲೇ ಶಾಲೆಗೆ ಕರೆಸಿಕೊಳ್ಳುತ್ತಿರುವ ಶಿಕ್ಷಣ ಇಲಾಖೆ, ಅನಗತ್ಯವಾಗಿ ಸಮಸ್ಯೆಯನ್ನು ಮೈಮೇಲೆಳೆದುಕೊಳ್ಳುವಂತೆ ಕಾಣುತ್ತಿದೆ ಸಂಘ ಹೇಳಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *