ಡಿವಿಜಿ ಸುದ್ದಿ, ಹರಪನಹಳ್ಳಿ : ತಾಲ್ಲೂಕಿನ ಉಚ್ಚಂಗಿದುರ್ಗದಲ್ಲಿ ದಾವಣಗೆರೆ ಉತ್ತರವಲಯದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ 3 ದಿನಗಳ ಚಾರಣ ಮತ್ತು ಪರಿಸರ ಅಧ್ಯಯನ, ಸ್ವಚ್ಛತಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ತಿರುಕಮ್ಮ ಉದ್ಘಾಟನೆ ಮಾಡಿದರು. ನಂತರ ಸ್ಕೌಟ್ಸ್ ಮತ್ತು ಗೈಡ್ಸ್ ದಳದ ರಚನೆ ಮಾಡಲಾಯಿತು. ಮಕ್ಕಳು ಐತಿಹಾಸಿಕ ಪ್ರಸಿದ್ಧ ಉಚ್ಚoಗೆಮ್ಮನ ದೇವಸ್ಥಾನ, ಕೋಟೆಯಲ್ಲಿ ಸ್ವಚ್ಛ ಮಾಡಿದರು. ಗ್ರಾಮದಲ್ಲಿ ಪರಿಸರ ಸ್ವಚ್ಛವಾಗಿ ಕಾಪಾಡಿಕೊಳ್ಳವ ಜೊತೆಗೆ ಪ್ಲಾಸ್ಟಿಕ್ ಬಳಕೆ ನಿಷೇಧ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಲಾಯಿತು.
ರಾತ್ರಿ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಗೆ ಹಲವು ಸ್ಪರ್ಧೆಗಳನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಶಿಬಿರದ ತರಬೇತುದಾರರಾಗಿ ಶಿವಣ್ಣ,ಹಾಲಪ್ಪ, ತರಬೇತಿ ಆಯುಕ್ತ ತಮ್ಮಣ್ಣನವರ್, ಸುರೇಶ್, ಕವಿತಾ, ಕೆಂಚಪ್ಪ, ಮಂಜುನಾಥ್, ಗ್ರಾಮ ಪಂಚಾಯಿತಿ ಸರ್ವ ಸದಸ್ಯರೂ ಹಾಗೂ ದೇವಸ್ಥಾನದ ಸಿಬ್ಬಂದಿಗಳು ಭಾಗವಹಿಸಿದ್ದರು.



