Connect with us

Dvgsuddi Kannada | online news portal | Kannada news online

ಆನ್ ಲೈನ್ ಮದ್ಯ ಮಾರಾಟ ಅಧ್ಯಯನಕ್ಕೆ ಹಿರಿಯ ಅಧಿಕಾರಿಗಳ ಸಮಿತಿ ನೇಮಕ: ಸಚಿವ ಎಚ್. ನಾಗೇಶ್

ಪ್ರಮುಖ ಸುದ್ದಿ

ಆನ್ ಲೈನ್ ಮದ್ಯ ಮಾರಾಟ ಅಧ್ಯಯನಕ್ಕೆ ಹಿರಿಯ ಅಧಿಕಾರಿಗಳ ಸಮಿತಿ ನೇಮಕ: ಸಚಿವ ಎಚ್. ನಾಗೇಶ್

ಡಿವಿಜಿ ಸುದ್ದಿ, ಬೆಂಗಳೂರು: ಆನ್‍ಲೈನ್ ಮದ್ಯ ಮಾರಾಟ ಬಗ್ಗೆ ಸರ್ಕಾರದ  ಚಿಂತನೆ ನಡೆಸಿದ್ದು, ಈ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ಬೇರೆ ರಾಜ್ಯಗಳಲ್ಲಿ ಆನ್‍ಲೈನ್‍ನಲ್ಲಿ ಮದ್ಯ ಮಾರಾಟ ಹೇಗೆ ಮಾಡಲಾಗುತ್ತಿದೆ. ಈ ಬಗ್ಗೆ ವರದಿ ನೀಡಲು ಅಬಕಾರಿ ಆಯುಕ್ತ ಲೋಕೇಶ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ ಎಂದರು.

ಹಿರಿಯ ಅಧಿಕಾರಿಗಳು ನೀಡುವ ವರದಿ ಆಧಾರಿಸಿ ಮುಂದಿನ ತೀರ್ಮಾನ ಮಾಡುತ್ತೇವೆ. ಇದಾದ ಬಳಿಕ ಸಿಎಂ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದವರ ವಯಸ್ಸು ಎಷ್ಟು? ಯಾರು ಆರ್ಡರ್ ಮಾಡುತ್ತಿದ್ದಾರೆ ಎಂಬ ಮಾಹಿತಿ ತಿಳಿಯಬೇಕಿದೆ. ಇದಕ್ಕಾಗಿ ಅಧಿಕಾರಿಗಳ ತಂಡ ವರದಿ ಸಿದ್ಧಪಡಿಸುತ್ತಿದೆ ಎಂದರು.

ಕೆಲವರು ಮದ್ಯ ಖರೀದಿ ಮಾಡಲು ಕೆಲವರು ಹಿಂಜರಿಯುತ್ತಾರೆ. ಮದ್ಯದ ಅಂಗಡಿಗೆ ಹೋಗಲು ಹಿಂದೇಟು ಹಾಕುತ್ತಾರೆ.  ಆನ್ ಲೈನ್ ಮಾರಾಟ ಅನುಕೂಲ ಆಗುತ್ತೆ. ಈ ಬಗ್ಗೆ ತಜ್ಞರು, ಬುದ್ಧಿಜೀವಿಗಳ ಜೊತೆ ಚರ್ಚೆ ಮಾಡುತ್ತೇವೆ. ಇದಕ್ಕೆ ವಿರೋಧಗಳು ಕೂಡ ಇದೆ. ಎಲ್ದಕ್ಕೂ ವರದಿ ಬಂದ ಮೇಲೆಯೇ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಇಂದಿನಿಂದ ಬಾರ್ ಅಂಡ್ ರೆಸ್ಟೋರೆಂಟ್ ಆರಂಭಕ್ಕೆ ಅವಕಾಶ ನೀಡಲಾಗಿದೆ. ನಿತ್ಯ 80 ಕೋಟಿ ರೂ. ಆದಾಯ ಲಭಿಸುತ್ತಿದ್ದು, ಸದ್ಯ ಬಾರ್ ಅಂಡ್ ರೆಸ್ಟೋರೆಂಟ್‍ಗಳಿಗೆ ಅವಕಾಶ ನೀಡುರುವುದರಿಂದ ಈಗ ಮತ್ತೆ ಅದು ಶೇ.50 ಆದಾಯ ಜಾಸ್ತಿಯಾಗುವ ನಿರೀಕ್ಷೆ ಇದೆ. 2019-20 ರಲ್ಲಿ 20,900 ಸಾವಿರ ಕೋಟಿ ರೂ. ಆದಾಯ ಗಳಿಸುವ ಟಾರ್ಗೆಟ್ ಇತ್ತು. ಈಗ 22,700 ಕೋಟಿ ರೂ. ಆದಾಯದ ಟಾರ್ಗೆಟ್ ಇದೆ. ಎಂಎಸ್‍ಐಎಲ್ ಹೊಸದಾಗಿ ಲೈಸೆನ್ಸ್ ನೀಡುತ್ತಿದ್ದು, ಬೇರೆ ಯಾವುದೇ ಲೈಸನ್ಸ್ ನೀಡುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

 

ಡ್ರಗ್ಸ್ ವಿಚಾರಗಳು ಇಲಾಖೆ ಗಮನಕ್ಕೆ ಬಂದರೆ ಪೊಲೀಸ್ ಇಲಾಖೆಯ ಗಮನ ತರುವ ಕೆಲಸ ಮಾಡುತ್ತೇವೆ. ಪೊಲೀಸ್ ಅಧಿಕಾರಿಗಳ ಜೊತೆ ಅಬಕಾರಿ ಅಧಿಕಾರಿಗಳು ಜಂಟಿ ಕಾರ್ಯಚರಣೆಗೆ ಚಿಂತನೆ ನಡೆಯುತ್ತಿದೆ. ಸಿಸಿಬಿ,ಸೆಂಟ್ರಲ್ ಐಜಿ ಬೆಂಗಳೂರು ನಗರ ಆಯುಕ್ತರ ನೇತೃತ್ವದಲ್ಲಿ ಕಾರ್ಯಚರಣೆಗೆ ಚಿಂತನೆ ಇದೆ. ಹಿರಿಯ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದರು.

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top