ಡಿವಿಜಿಸುದ್ದಿ.ಕಾಂ, ಚನ್ನಗಿರಿ: ಏಷ್ಯಾದ ಎರಡನೇ ಅತಿ ದೊಡ್ಡ ಕೆರೆಯಾದ ಶಾಂತಿಸಾಗರ ಕೆರೆ ತುಂಬಿರುವ ಹಿನ್ನೆಲೆಯಲ್ಲಿ , ಕೆರೆಯ ಒತ್ತುವರಿ ವಿರುದ್ಧ ಹೋರಾಡಿದ್ದ ಖಡ್ಗ ಸಂಘಟನೆಯಿಂದ ಇಂದು ಬಾಗಿನ ಕಾರ್ಯಕ್ರಮ ಹಮ್ಮಿಕೊಂಡಿದೆ.
ಮಧ್ಯಾಹ್ನ 12 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಪಾಂಡುಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಸ್ವಾಮೀಜಿ, ಚನ್ನಗಿರಿ ಹಿರೇ ಮಠದ ಶ್ರೀ ಶಾಂತವೀರ ಸ್ವಾಮೀಜಿ ನೇತೃತ್ವದಲ್ಲಿ ಬಾಗಿನ ಕಾರ್ಯಕ್ರಮ ನಡೆಯಲಿದೆ. ಸೂಳೆಕೆರೆ ಉಳಿಸುವ ಅಭಿಯಾನಕ್ಕೆ ಕೈಜೋಡಿಸಿದ ಎಲ್ಲಾರು ಭಾಗಿಯಾಗಬೇಕು ಎಂದು ಖಡ್ಗ ಸಂಘಟನೆ ಮನವಿ ಮಾಡಿಕೊಂಡಿದೆ.
ಸೂಳೆಕೆರೆ ಒತ್ತುವರಿ ಖಂಡಿಸಿ ಖಡ್ಗ ಸಂಘಟನೆ ಕಳೆದ ಐದಾರು ವರ್ಷಗಳಿಂದ ನಿರಂತರ ಹೋರಾಟದ ಫಲವಾಗಿ ಸರ್ಕಾರ ಸರ್ವೇ ಕಾರ್ಯಕ್ಕೆ ಮುಂದಾಗಿತ್ತು. ಕಳೆದ ತಿಂಗಳು ಸರ್ವೇ ಕಾರ್ಯಕ್ಕೂ ಚಾಲನೆ ನೀಡಲಾಗಿತ್ತು.



