ಡಿವಿಜಿ ಸುದ್ದಿ, ಶಿವಮೊಗ್ಗ: ಬೆಳಗಾವಿ ಗ್ರಾಮಾಂತರ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಮಗನ ಮದುವೆ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ.
ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹಾಗೂ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಸಹೋದರ ಬಿ.ಕೆ ಶಿವಕುಮಾರ್ ಪುತ್ರಿ ಹಿತಾ ನಿಶ್ಚಿತಾರ್ಥ ಕಾರ್ಯಕ್ರಮ ಇಂದು ಶಿವಮೊಗ್ಗದಲ್ಲಿ ನಡೆಯಿತು. ಕೊರೊನಾ ವೈರಸ್ ಹಿನ್ನೆಲೆ ಕಾರ್ಯಕ್ರಮಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರಬಾರದೆಂಬ ನಿಯಮವಿದ್ದರೂ, ಸಮಾರಂಭದಲ್ಲಿ 50ಕ್ಕಿಂತ ಹೆಚ್ಚು ಜನರು ಭಾಗಿಯಾಗಿ ಕೊರೊನಾ ನಿಯಮವನ್ನು ಉಲ್ಲಂಘಿಸಿದ್ದಾರೆ.

ನಗರದ ಸರ್ಜಿ ಕನ್ವೆನ್ಷನ್ ಹಾಲ್ ನಲ್ಲಿ ನಡೆದ ಎಂಗೇಜ್ ಮೆಂಟ್ನಲ್ಲಿ ಹಿತಾ ಮತ್ತು ಮೃಣಾಲ್ ಪರಸ್ಪರ ಉಂಗುರ ಬದಲಾಯಿಸಿಕೊಂಡರು. ಇದಕ್ಕೂ ಮೊದಲು ಪೂಜೆ-ಪುನಸ್ಕಾರ ನಡೆದಿದ್ದು, ಶಾಸಕಿ ಪಾಲ್ಗೊಂಡಿದ್ದರು. ನಿಶ್ಚಿತಾರ್ಥ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸಹ ಭಾಗಿಯಾಗಿದ್ದರು.




