ಮತ್ತೆ ಪೊಲೀಸರ ವಿರುದ್ಧ ಗುಡುಗಿದ ಸಚಿವ ಈಶ್ವರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಶಿವಮೊಗ್ಗ: ಜಿಲ್ಲೆಯಲ್ಲಿ  ಅಪರಾಧ ಪ್ರಕರಣಗಳು ಹೆಚ್ಚಾಗುತತ್ತಿದ್ದು,  ಪೊಲೀಸರನ್ನು ಕಂಡರೆ ಕಳ್ಳರಿಗೆ ಭಯವೇ ಇಲ್ಲದಂತಾಗಿದೆ. ಅಪರಾಧ ತಡೆಗಟ್ಟುವಲ್ಲಿ ಪೊಲೀಸರ ವೈಫಲ್ಯ ಎದ್ದು ಕಾಣುತ್ತಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಪೊಲೀಸರ ವಿರುದ್ಧ ಮತ್ತೆ ಕಿಡಿಕಾರಿದರು.

ಶಿವಮೊಗ್ಗ ನಗರದ ಕುವೆಂಪುನಗರ ಬಡಾವಣೆಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ನಂತರ ಮಾತನಾಡಿದ ಅವರು ಆನಂದರಾಯರು ಶಿವಮೊಗ್ಗ ಕ್ಷೇತ್ರದ ಶಾಸಕರಾಗಿದ್ದ ಅಪರಾಧ ಪ್ರಕರಣಗಳು ಹೆಚ್ಚಾಗಿದ್ದವು. ನಂತರದ ದಿನಗಳಲ್ಲಿ ಅಪರಾಧ ಪ್ರಕರಣಗಳ ಕಡಿಮೆ ಆಗಿದ್ದವು. ಆದರೆ ಇದೀಗ ಮತ್ತೆ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದರು.

ನಗರದಲ್ಲಿ ರೌಡಿಗಳು ಮಚ್ಚು, ಲಾಂಗ್ ಹಿಡಿದುಕೊಂಡು ಓಡಾಡುತ್ತಿದ್ದಾರೆ. ಕೊಲೆ, ಸುಲಿಗೆ ಪ್ರಕರಣಗಳು ಹೆಚ್ಚಾಗುತ್ತಿವೆ. ಗಾಂಜಾ, ಹುಕ್ಕಾ ಸೇವನೆ ಹೆಚ್ಚಾಗಿರುವ ಜೊತೆಗೆ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚುತ್ತಿದ್ದಾರೆ. ಹೀಗಿದ್ದರೂ ಪೊಲೀಸರು ಅಪರಾಧ ತಡೆಗಟ್ಟಲು, ಯಾವುದೇ ಕ್ರಮ ಕೈಗೊಳ್ಳಲು ಮುಂದಾಗಿಲ್ಲ. ಪೊಲೀಸರು ಕೆಲಸ ಮಾಡ್ತೀರಾ…? ಅಥವಾ  ಮಲಗಿದ್ದೀರಾ ಎಂದು ಗೊತ್ತಾಗುತ್ತಿಲ್ಲ ಎಂದರು.

ಪೊಲೀಸ್ ಇಲಾಖೆ ಬಗ್ಗೆ ಪ್ರತ್ಯೇಕ ಸಭೆ ನಡೆಸುತ್ತೇನೆ. ನಿಮ್ಮಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದು ನನಗೆ ಗೊತ್ತಿದೆ ಎಂದು ಸಚಿವ ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *