ಡಿವಿಜಿ ಸುದ್ದಿ, ಶಿವಮೊಗ್ಗ: ಮಲೆನಾಡಿ ಶಿವಮೊಗ್ಗ ಜಿಲ್ಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಈಗಾಗಲೇ ಅನೇಕ ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ಇದೀಗ ತುಂಗಾ ಜಲಾಯಶಯ ಭರ್ತಿಯಾಗಿದ್ದು, 22 ಗೇಟ್ ಗಳ ಮೂಲಕ ನೀರು ಹೊರಕ್ಕೆ ಬಿಡಲಾಯಿತು.
ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ತುಂಬಿದ್ದು 22 ಗೇಟ್ಗಳ ಮೂಲಕ 71 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಮಲೆನಾಡಿನಲ್ಲಿ ನಿರಂತರ ಮಳೆ ಹಿನ್ನೆಲೆಯಲ್ಲಿ ಡ್ಯಾಂ ನಿಂದ ನೀರನ್ನು ಹೊರಕ್ಕೆ ಬಿಡಲಾಯಿತು.

ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನೀರಿನ ಮಟ್ಟ 588.24 ಮೀಟರ್ಗಿಂತಲೂ ಹೆಚ್ಚು ತಲುಪಿದೆ.
ಗಾಜನೂರು ಡ್ಯಾಂ 588.24 ಮೀಟರ್ ಎತ್ತರ ನೀರು ಸಂಗ್ರಹ ಸಾಮಾರ್ಥ್ಯ ಹೊಂದಿದೆ. ಶೃಂಗೇರಿ, ತೀರ್ಥಹಳ್ಳಿ ಭಾಗಗಳಲ್ಲಿ ಮಳೆ ಬೀಳುತ್ತಿರುವ ಕಾರಣ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಡ್ಯಾಂಗೆ 70 ಸಾವಿರ ಕ್ಯೂಸೆಕ್ ಒಳ ಹರಿವು ಬರುತ್ತಿರುವ ಹಿನ್ನೆಲೆಯಲ್ಲಿ ಜನರು ಸಂತಸ ವ್ಯಕ್ತಪಡಿಸುತ್ತಿದ್ದಾರೆ.



