ನನ್ನ ಪತಿಯನ್ನು ಸುಮ್ಮನೆ ಬಿಡಬೇಡಿ ಅಂತಾ ವಾಟ್ಸಪ್ ಮಾಡಿ, ಆತ್ಮಹತ್ಯೆಗೆ ಶರಣಾದ ಖ್ಯಾತ ಗಾಯಕಿ ಸುಶ್ಮಿತಾ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಬೆಂಗಳೂರು: ನನ್ನ ಪತಿಯನ್ನು ಸುಮ್ಮನೆ ಬಿಡಬೇಡ ಎಂದು ತನ್ನ ತಾಯಿಗೆ ವಾಟ್ಸಪ್ ಮೆಸೇಜ್ ಕಳುಹಿಸಿದ ಖ್ಯಾತ ಗಾಯಕಿ ಸುಶ್ಮಿತಾ ಆತ್ಮಹತ್ಯೆ ಬೆಂಗಳೂರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸುಶ್ಮಿತಾ(26) ಆತ್ಮಹತ್ಯೆಗೆ ಶರಣಾದ ಗಾಯಕಿ. ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುವ ಶರತ್ ಕುಮಾರ್ ಅವರನ್ನು ಮದುವೆ ಆಗಿದ್ದರು. ಸುಶ್ಮಿತಾ ತನ್ನ ತಾಯಿ ಹಾಗೂ ತಮ್ಮನಿಗೆ ವಾಟ್ಸಪ್ ಮೂಲಕ ಸಂದೇಶ ರವಾನಿಸಿ ಬೆಂಗಳೂರಿನ ನಾಗರಬಾವಿಯಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅಮ್ಮ ನನ್ನನ್ನು ಕ್ಷಮಿಸು. ನಾನು ಮಾಡಿಕೊಂಡ ತಪ್ಪಿಗೆ ನಾನೇ ಶಿಕ್ಷೆ ಅನುಭವಿಸಿದ್ದೇನೆ. ನನ್ನನ್ನು ದಯವಿಟ್ಟು ಕ್ಷಮಿಸು. ನನ್ನ ಪತಿ ತನ್ನ ದೊಡ್ಡಮ್ಮನ ಮಾತು ಕೇಳಿ ನನಗೆ ಚಿತ್ರಹಿಂಸೆ ಕೊಡುತ್ತಿದ್ದರು. ನಾನು ಏನೇ ಮಾತನಾಡಿದ್ರೂ ನನಗೆ ಮನೆ ಬಿಟ್ಟು ಹೋಗು ಎಂದು ಹೇಳುತ್ತಿದ್ದರು. ನನಗೆ ಮಾನಸಿಕವಾಗಿ ತುಂಬಾ ಕಿರುಕುಳ ನೀಡುತ್ತಿದ್ದರು. ಅವರನ್ನು ಮಾತ್ರ ಸುಮ್ಮನೆ ಬಿಡಬೇಡ. ನನ್ನ ಸಾವಿಗೆ ಶರತ್, ವೈದೇಹಿ, ಗೀತಾ ನೇರವಾಗಿ ಕಾರಣ. ನಾನು ಎಷ್ಟು ಬೇಡಿಕೊಂಡರೂ ಕಾಲು ಹಿಡಿದರೂ ಅವನ ಮನಸ್ಸು ಕರಗಲಿಲ್ಲ ಎಂದು ವಾಟ್ಸಪ್ ಮಾಡಿದ್ದಾರೆ.

ಅಲ್ಲದೆ ಶರತ್ ಮನೆಯಲ್ಲಿ ನನಗೆ ಸಾಯಲು ಇಷ್ಟವಿರಲಿಲ್ಲ. ಮದುವೆ ಆದಾಗಿನಿಂದ ಇದೇ ರೀತಿ ಹಿಂಸೆ. ಅಮ್ಮ ಯಾರ ಹತ್ತಿರ ಈ ನೋವನ್ನು ಹೇಳಿಕೊಂಡಿರಲಿಲ್ಲ. ನನ್ನನ್ನು ನಮ್ಮ ಊರಿನಲ್ಲಿ ಮಣ್ಣು ಮಾಡು ಅಥವಾ ಸುಡು. ನನ್ನ ಕಾರ್ಯವನ್ನು ತಮ್ಮನೇ ಮಾಡಲಿ. ಅವರನ್ನ ಮಾತ್ರ ಸುಮ್ಮನೆ ಬಿಡಬೇಡ, ಇಲ್ಲದಿದ್ದರೆ ನನ್ನ ಆತ್ಮಕ್ಕೆ ಶಾಂತಿ ಸಿಗಲ್ಲ. ಅಮ್ಮ ನಿನ್ನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇನೆ. ನಿನಗೋಸ್ಕರ ನನ್ನ ತಮ್ಮ ಸಚಿನ್ ಇದ್ದಾನೆ. ಅವನನ್ನು ಚೆನ್ನಾಗಿ ನೋಡಿಕೊಳ್ಳಿ. ಕೊನೆಯಾದಾಗಿ ತಮ್ಮ ಬಳಿ ಮತ್ತೊಮ್ಮೆ ಕ್ಷಮೆಯಾಚಿಸುತ್ತೇನೆ. ಅಮ್ಮನಿಗೆ ತೊರಿಸು ಮರಿಬೇಡ ಎಂದು ಸುಶ್ಮಿತಾ ವಾಟ್ಸಪ್‍ನಲ್ಲಿ ಕಳುಹಿಸಿದ್ದಾರೆ. ಸುಶ್ಮಿತಾ ‘ಹಾಲು-ತುಪ್ಪ’, ‘ಶ್ರೀಸಾಮಾನ್ಯ’ ಸೇರಿ ಹಲವು ಸಿನಿಮಾಗಳಲ್ಲಿ ಹಾಡಿದ್ದಾರೆ.  ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *