Connect with us

Dvgsuddi Kannada | online news portal | Kannada news online

ನೆರೆ ಸಂತ್ರಸ್ತ ಮಕ್ಕಳಿಗೆ ತರಳಬಾಳು ವಿದ್ಯಾಸಂಸ್ಥೆಯಿಂದ ಉಚಿತ ಶಿಕ್ಷಣ

ದಾವಣಗೆರೆ

ನೆರೆ ಸಂತ್ರಸ್ತ ಮಕ್ಕಳಿಗೆ ತರಳಬಾಳು ವಿದ್ಯಾಸಂಸ್ಥೆಯಿಂದ ಉಚಿತ ಶಿಕ್ಷಣ

ಡಿವಿಜಿಸುದ್ದಿ.ಕಾಂ, ಸಿರಿಗೆರೆ: ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಒಂದು ಸಾವಿರ ಮಕ್ಕಳಿಗೆ ಉಚಿತ ಊಟ, ವಸತಿ ಹಾಗೂ ಶಿಕ್ಷಣ ನೀಡಲು ತರಳಬಾಳು ವಿದ್ಯಾಸಂಸ್ಥೆ ಮುಂದಾಗಿದೆ ಎಂದು ಶ್ರೀ ತರಳಬಾಳು ಜಗದ್ಗುರು  ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ಸಿರಿಗೆರೆಯ ವಿದ್ಯಾಸಂಸ್ಥೆಯ ಕೇಂದ್ರ ಕಚೇರಿಗೆ ಬೆಳಗಾವಿ ಹಾಗೂ ಗೋಕಾಕಿನ ಬೀರನಗಡ್ಡಿ ಮತ್ತು ಢವಳೇಶ್ವರ ಗ್ರಾಮಗಳ ಪೋಷಕರು ಭೇಟಿ ನೀಡಿದ ಸಂದರ್ಭದಲ್ಲಿ  ಶೀಗಳು ಭರವಸೆ ಕೊಟ್ಟರು.

ಬೆಳಗಾವಿ ಜಿಲ್ಲೆ, ಗೋಕಾಕ ತಾಲ್ಲೂಕಿನ ಬೀರನಗಡ್ಡಿ, ಢವಳೇಶ್ವರ ಹಾಗೂ ಬಳೋಬಳ ಗ್ರಾಮಗಳ ಮಕ್ಕಳು ಈಗಾಗಲೇ ಸಿರಿಗೆರೆಯ ಶಾಲಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಇಚ್ಛಿಸಿರುವುದು ಸಂತಸದ ಸಂಗತಿ. ರಾಜ್ಯದ 13 ಜಿಲ್ಲೆಗಳಲ್ಲಿರುವ ತರಳಬಾಳು ವಿದ್ಯಾಸಂಸ್ಥೆಯ 275 ಶಾಲಾ-ಕಾಲೇಜುಗಳಲ್ಲಿ ಮಕ್ಕಳಿಗೆ ಉಚಿತ ಊಟ-ವಸತಿ ಹಾಗೂ ಶಿಕ್ಷಣ ನೀಡಲು ಅನುಮತಿ ನೀಡಲಾಗಿದೆ ಎಂದರು.

ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಸ್.ಬಿ. ರಂಗನಾಥ್, ವಿಶೇಷಾಧಿಕಾರಿ ಎಚ್.ವಿ. ವಾಮದೇವಪ್ಪ ಈ ಸಂದರ್ಭದಲ್ಲಿ  ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top