Connect with us

Dvgsuddi Kannada | online news portal | Kannada news online

ರಾಜ್ಯಕ್ಕೆ ಪ್ರವಾಹ ಪೀಡಿತ ವಿಶೇಷ ಆರ್ಥಿಕ ನೆರವಿಗೆ ದೇವೇಗೌಡ ಮನವಿ

ರಾಜ್ಯ ಸುದ್ದಿ

ರಾಜ್ಯಕ್ಕೆ ಪ್ರವಾಹ ಪೀಡಿತ ವಿಶೇಷ ಆರ್ಥಿಕ ನೆರವಿಗೆ ದೇವೇಗೌಡ ಮನವಿ

ಡಿವಿಜಿ ಸುದ್ದಿ, ಬೆಂಗಳೂರುಪ್ರವಾಹ ಪೀಡಿತ ಕರ್ನಾಟಕ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡುವಂತೆ  ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ  ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ  ಕೂಡ ಈ ಕುರಿತು ಕೇಂದ್ರ ಮೇಲೆ ಒತ್ತಡ ಹೇರಬೇಕು. ಕೋವಿಡ್‌ ಪ್ರಕರಣಗಳು ಮೇರೆ ಮೀರಿರುವ ಸಂದರ್ಭದಲ್ಲೇ ರಾಜ್ಯವು ಅತಿವೃಷ್ಟಿಗೆ ಸಿಲುಕಿದೆ. ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್‌ ಪೀಡಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ  ಎಲ್ಲಾ ಜಿಲ್ಲೆಯಲ್ಲಿ ಹಾನಿ ಆಗಿದೆ.

ಈ ಸಂದರ್ಭದಲ್ಲಿ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಗಳ ಜೊತೆಗೆ ಜನ, ಜಾನುವಾರ ರಕ್ಷಿಸುವ ಕೆಲಸ ಆಗಬೇಕಿದೆ. ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸಲು ವಿಶೇಷ ಕಾರ್ಯಪಡೆ ರಚಿಸಬೇಕಾಗಿದೆ.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಬೆಳೆಗಳು ಹಾನಿಗೊಳಲಾಗಿವೆ. ಮನೆ–ಮಠ ಕಳೆದುಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top