ಡಿವಿಜಿ ಸುದ್ದಿ, ಬೆಂಗಳೂರು: ಪ್ರವಾಹ ಪೀಡಿತ ಕರ್ನಾಟಕ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡುವಂತೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಕೂಡ ಈ ಕುರಿತು ಕೇಂದ್ರ ಮೇಲೆ ಒತ್ತಡ ಹೇರಬೇಕು. ಕೋವಿಡ್ ಪ್ರಕರಣಗಳು ಮೇರೆ ಮೀರಿರುವ ಸಂದರ್ಭದಲ್ಲೇ ರಾಜ್ಯವು ಅತಿವೃಷ್ಟಿಗೆ ಸಿಲುಕಿದೆ. ರಾಜ್ಯದ ಜನತೆ ಕಂಗಾಲಾಗಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೋವಿಡ್ ಪೀಡಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಎಲ್ಲಾ ಜಿಲ್ಲೆಯಲ್ಲಿ ಹಾನಿ ಆಗಿದೆ.
ಈ ಸಂದರ್ಭದಲ್ಲಿ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಗಳ ಜೊತೆಗೆ ಜನ, ಜಾನುವಾರ ರಕ್ಷಿಸುವ ಕೆಲಸ ಆಗಬೇಕಿದೆ. ರಾಜ್ಯದ ಅತಿವೃಷ್ಟಿ ಪರಿಸ್ಥಿತಿಯನ್ನು ನಿಭಾಯಿಸಲು ವಿಶೇಷ ಕಾರ್ಯಪಡೆ ರಚಿಸಬೇಕಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ರಾಜ್ಯದ ಎಲ್ಲ ಕಡೆಗಳಲ್ಲಿ ಬೆಳೆಗಳು ಹಾನಿಗೊಳಲಾಗಿವೆ. ಮನೆ–ಮಠ ಕಳೆದುಕೊಂಡವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.



