ನವದೆಹಲಿ: ಲಾಕ್ ಡೌನ್ ಸಂಕಷ್ಟಕ್ಕೆ ಸಿಲುಕಿದ ಬೀದಿಬದಿ ವ್ಯಾಪಾರಿಗಳ ನೆರವಿಗೆ ಕೇಂದ್ರ ಸ್ಪಂದಿಸಿದ್ದು, 5 ಸಾವಿರ ಕೋಟಿ ಸಾಲ ಮೀಸಲಿಟ್ಟಿದೆ.
ನರೇಂದ್ರ ಮೋದಿ ಪ್ರಕಟಿಸಿದ 20 ಲಕ್ಷ ಕೋಟಿ ಪ್ಯಾಕೇಜ್ಗೆ ಸಂಬಂಧಿಸಿದಂತೆ ಎರಡನೇ ದಿನ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ ಬೀದಿ ಬದಿ ವ್ಯಾಪಾರಸ್ಥರಿಗೆ 5 ಸಾವಿರ ಕೋಟಿ ಸಾಲವನ್ನು ಕೇಂದ್ರ ಸರ್ಕಾರ ನೀಡುವುದಾಗಿ ಘೋಷಿಸಿದರು.
ಮುಂದಿನ 1 ತಿಂಗಳ ಒಳಗಡೆ ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ನೀಡಲು ವಿಶೇಷ ಯೋಜನೆಯನ್ನು ತರಲಾಗುವುದು. ಕನಿಷ್ಟ 10 ಸಾವಿರ ರೂ. ಬಂಡವಾಳ ಹೂಡುವ ಬೀದಿ ಬದಿಯ ವ್ಯಾಪಾರಿಗಳಿಗೆ ನೆರವಾಗಲಿದೆ. ಒಟ್ಟು 50 ಲಕ್ಷ ಬೀದಿ ವ್ಯಾಪಾರಿಗಳಿಗೆ ನೆರವು ನೀಡಲು 5 ಸಾವಿರ ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದರು.



