Connect with us

Dvgsuddi Kannada | online news portal | Kannada news online

ವರ್ಣಭೇಧ ನೀತಿ ನಿವಾರಣೆಗೆ ಕಠಿಣ ಕಾನೂನು ಅಗತ್ಯ: ಕ್ರಿಕೆಟರ್ ಕಾರ್ಲೊಸ್ ಬ್ರಾಥ್ ವೇಟ್

ಕ್ರೀಡೆ

ವರ್ಣಭೇಧ ನೀತಿ ನಿವಾರಣೆಗೆ ಕಠಿಣ ಕಾನೂನು ಅಗತ್ಯ: ಕ್ರಿಕೆಟರ್ ಕಾರ್ಲೊಸ್ ಬ್ರಾಥ್ ವೇಟ್

ಲಂಡನ್‌: ವರ್ಣಭೇದ ನೀತಿಯು ವ್ಯವಸ್ಥೆಯಲ್ಲಿ ಗಟ್ಟಿಯಾಗಿ ನೆಲೆಯೂರಿದೆ. ಈ ಪಿಡುಗನ್ನು ನಿವಾರಿಸಲು  ಕಠಿಣ ಕಾನೂನಿನ ಅಗತ್ಯವಿದೆ ಎಂದು ವೆಸ್ಟ್‌ ಇಂಡೀಸ್‌ ಕ್ರಿಕೆಟ್   ಆಲ್‌ರೌಂಡರ್ ಕಾರ್ಲೊಸ್‌ ಬ್ರಾಥ್‌ವೇಟ್ ಹೇಳಿದ್ದಾರೆ.

ಇತ್ತೀಚೆಗೆ ಅಮೆರಿಕನ್‌ ಜಾರ್ಜ್‌ ಫ್ಲಾಯ್ಡ್‌ ಅವರನ್ನು ಶ್ವೇತ ವರ್ಣೀಯ ಪೊಲೀಸರ ಕ್ರೌರ್ಯಕ್ಕೆ ಬಲಿಯಾಗಿದ್ದರು.  ಇದು ಅಮೆರಿಕದಾದ್ಯಂತ ಭಾರಿ ಜನಾಕ್ರೋಶಕ್ಕೆ ಕಾರಣವಾಗಿತ್ತು. ಫ್ಲಾಯ್ಡ್‌ ಸಾವನ್ನು ಖಂಡಿಸಿ ವಿಶ್ವದಾದ್ಯಂತ ಬ್ಲಾಕ್‌ ಲೈವ್ಸ್‌ ಮ್ಯಾಟರ್‌  ಅಭಿಯಾನ ಆಯೋಜಿಸಿದ್ದವು. ಇದಕ್ಕೆ  ಕ್ರೀಡಾ ಲೋಕದಿಂದ ಬೆಂಬಲ ವ್ಯಕ್ತವಾಗಿತ್ತು.

ಕ್ರೀಡೆಯಲ್ಲಿ ಕಪ್ಪು ಬ್ಯಾಡ್ಜ್‌ ಅಥವಾ ತೋಳಿಗೆ ಕಪ್ಪು ಪಟ್ಟಿ ಧರಿಸಿಬಿಟ್ಟರೆ ಇಂತಹ  ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ. ಮೂಲವಾಗಿ ಕಾನೂನಿನಲ್ಲಿ  ಬದಲಾವಣೆಯಾಗಬೇಕು. ಆಗ ಮಾತ್ರ ಇಂತಹ  ತಾರತಮ್ಯವನ್ನು ಹೋಗಲು ಸಾಧ್ಯ ಎಂದಿದ್ದಾರೆ.

ಈ ತಿಂಗಳ ಎಂಟರಿಂದ 12ರವರೆಗೆ ಇಂಗ್ಲೆಂಡ್ ನಲ್ಲಿ ನಡೆಯಲಿರುವ  ಮೊದಲ ಟೆಸ್ಟ್‌ ಪಂದ್ಯದಲ್ಲಿ ಬ್ಲಾಕ್‌ ಲೈವ್ಸ್‌ ಮ್ಯಾಟರ್‌  ಲೋಗೊ ಧರಿಸಿ  ವೆಸ್ಟ್‌ ಇಂಡೀಸ್‌ ತಂಡದ ಆಟಗಾರರು ಆಡಲಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

To Top