Connect with us

Dvgsuddi Kannada | online news portal | Kannada news online

ಧೋನಿ 2024 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿ: ಸುಬ್ರಮಣಿಯನ್ ಸ್ವಾಮಿ

ರಾಷ್ಟ್ರ ಸುದ್ದಿ

ಧೋನಿ 2024 ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಕ್ರಿಕೆಟ್‌ನ ಎಲ್ಲಾ ಮಾದರಿಯಲ್ಲಿಯೂ ಅತ್ಯುತ್ತಮ ನಾಯಕತ್ವ ಪ್ರದರ್ಶಿಸಿರುವ ಕ್ರಿಕೆಟಿಗ ಮಹೇಂದ್ರ ಸಿಂಗ್‌ ಧೋನಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಅವರು ಸ್ಪರ್ಧಿಸುವ ಮೂಲಕ ಸಾರ್ವಜನಿಕ ಬದುಕಿನಲ್ಲಿ ಹೋರಾಟ ಮುಂದುವರಿಸಲಿ ಎಂದು ಬಿಜೆಪಿ ರಾಜ್ಯಸಭೆ ಸದಸ್ಯ ಸುಬ್ರಮಣಿಯನ್‌ ಸ್ವಾಮಿ ಹೇಳಿದ್ದಾರೆ.

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಹೇಂದ್ರ ಸಿಂಗ್‌ ಧೋನಿ ನಿವೃತ್ತಿ ಘೋಷಿಸಿದ ನಂತರ ಇಂದು ಬೆಳಗ್ಗೆ ಟ್ವೀಟ್‌ ಮಾಡಿರುವ ಸುಬ್ರಮಣಿಯನ್‌ ಸ್ವಾಮಿ, ಎಂ.ಎಸ್. ಧೋನಿ ಕ್ರಿಕೆಟ್‌ನಿಂದ ನಿವೃತ್ತರಾಗುತ್ತಿದ್ದಾರೆ. ಆದರೆ ಬೇರೆ ಯಾವುದರಿಂದಲೂ ಅಲ್ಲ. ಅವರ ಪ್ರತಿಭೆಯು ಸಮಸ್ಯೆಗಳ ವಿರುದ್ಧ ಹೋರಾಡಲು ನೆರವಾಗುತ್ತದೆ. ಕ್ರಿಕೆಟ್‌ನಲ್ಲಿ ಅವರು ಪ್ರದರ್ಶಿಸಿದ ಸ್ಪೂರ್ತಿದಾಯಕ ನಾಯಕತ್ವ ಸಾರ್ವಜನಿಕ ಜೀವನಕ್ಕೂ ಅಗತ್ಯವಿದೆ. ಅವರು 2024ರ ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಹೋರಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

doni

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರಸಿಂಗ್ ಧೋನಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಶನಿವಾರ ವಿದಾಯ ಹೇಳಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top