ಕೇರಳ ರಣಜಿ ತಂಡದಲ್ಲಿ ಸ್ಥಾನ ಪಡೆದ ಶ್ರೀಶಾಂತ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ತಿರುವನಂತಪುರಂ: ಐಫಿಎಲ್  ಫಿಕ್ಸಿಂಗ್ ಆರೋಪದಲ್ಲಿ ನಿಷೇಧಕ್ಕೆ ಒಳಗಾಗಿದ್ದ ಟೀಂ ಇಂಡಿಯಾ ಮೊದಲ ಟಿ20 ವಿಶ್ವಕಪ್ ಗೆದ್ದ ತಂಡದ ಬೌಲರ್ ಎಸ್.ಶ್ರೀಶಾಂತ್ ಕ್ರಿಕೆಟ್‍ಗೆ ಮತ್ತೆ ಕಮ್‍ಬ್ಯಾಕ್ ಮಾಡುವ ಉತ್ಸಾಹದಲ್ಲಿದ್ದಾರೆ.

37 ವರ್ಷದ ಕ್ರಿಕೆಟಿಗ ಶ್ರೀಶಾಂತ್ ನಿಷೇಧದ ಶಿಕ್ಷೆಗೆ ಗುರಿಯಾಗಿದ್ದರು. ಸದ್ಯ ಬಿಸಿಸಿಐ ವಿಧಿಸಿದ್ದ ನಿಷೇಧದ ಶಿಕ್ಷೆ ಸೆಪ್ಟೆಂಬರ್ ಗೆ ಅಂತ್ಯವಾಗಲಿದೆ. ಇತ್ತ ನಿಷೇಧದ ಅವಧಿ ಮುಕ್ತಾಯವಾಗುತ್ತಿದಂತೆ ಮತ್ತೆ ಶ್ರೀಶಾಂತ್ ಅವರನ್ನು ತಂಡಕ್ಕೆ ಪರಿಗಣಿಸಲು ಕೇರಳ ಕ್ರಿಕೆಟ್ ಸಂಸ್ಥೆ ನಿರ್ಧರಿಸಿದೆ.

ರಣಜಿ ಟ್ರೋಪಿಗಾಗಿ ಕೇರಳ ಕ್ರಿಕೆಟ್ ಸಂಸ್ಥೆ ಪ್ರಕಟಿಸಿರುವ ಸಂಭವನೀಯ ರಣಜಿ ಆಟಗಾರರ ಪಟ್ಟಿಯಲ್ಲಿ ಶ್ರೀಶಾಂತ್ ಹೆಸರನ್ನು ಸೇರಿಸಿದೆ. ಆದರೆ ಶ್ರೀಶಾಂತ್ ಕಮ್‍ಬ್ಯಾಕ್ ಆತನ ಫಿಟ್ನೆಸ್ ಮೇಲೆ ನಿರ್ಧಾರವಾಗಲಿದೆ. ಸಂಸ್ಥೆ ನಿರ್ವಹಿಸುವ ಫಿಟ್ನೆಸ್ ಪರೀಕ್ಷೆಯಲ್ಲಿ ಶ್ರೀಶಾಂತ್ ಉರ್ತೀರ್ಣರಾದರೆ ಮತ್ತೆ ಕ್ರೀಡಾಂಗಣದಲ್ಲಿ ಮಿಂಚುವ ಅವಕಾಶ ಲಭಿಸಲಿದೆ.

ರಣಜಿ ಆಡುವ ಅವಕಾಶ ಕೊಟ್ಟ ಸಂಸ್ಥೆಗೆ ಧನ್ಯವಾದ ತಿಳಿಸುತ್ತೇನೆ. ನನ್ನ ಫಿಟ್ನೆಸ್ ಸಾಬೀತು ಪಡಿಸಿ ಮತ್ತೆ ಕ್ರಿಕೆಟ್‍ಗೆ ಕಮ್‍ಬ್ಯಾಕ್ ಮಾಡುತ್ತೇನೆ. ಎಲ್ಲಾ ವಿವಾದಗಳು ದೂರವಾಗಿ ಒಳ್ಳೆಯ ದಿನಗಳು ಬರುತ್ತದೆ ಎಂದು ಶ್ರೀಶಾಂತ್ ಹೇಳಿದ್ದಾರೆ.

srishanth 2

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *