ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ವತಿಯಿಂದ ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ ಹುಟ್ಟುವರ ಹಬ್ಬದ ಅಂಗವಾಗಿ ಆಯೋಜಿಸಿರುವ ಎಸ್.ಎಸ್. ಕಪ್ -2020 ಟೆನ್ನಿಸ್ ಬಾಲ್ ಟೂರ್ನಿಮೆಂಟ್ ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ಉತ್ತಮ ಆರೋಗ್ಯಕ್ಕೆ ಕ್ರೀಡೆ ಅತಿ ಮುಖ್ಯವಾಗಿದ್ದು, ಈಗಿನ ಯುವಕರು ಮೊಬೈಲ್ ಗೆ ಹೆಚ್ಚು ಗಮನ ನೀಡದೆ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು ಹಾಗೂ ಟೂರ್ನಿಮೆಂಟ್ ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಆಟಗಾರರಿಗೂ ಶುಭ ಕೋರಿದರು.
ಈ ಸಂದರ್ಭದಲ್ಲಿ ಬಡಾವಣೆ ಠಾಣೆ ಪಿ.ಎಸ್.ಐ ಅಶ್ವಿನ್ ಕುಮಾರ್, ದಾವಣಗೆರೆ ದಕ್ಷಿಣ ಸಂಚಾರಿ ಪಿ.ಎಸ್.ಐ ಕಿರಣ್ ಕುಮಾರ್, ಕ್ರೀಡಾ ಪ್ರೋತ್ಸಾಹಕರಾದ ಶ್ರೀನಿವಾಸ್ ಶಿವಗಂಗಾ, ಮಹದೇವ್, ರಾಜು ರೆಡ್ಡಿ, ರಮೇಶ್,ಸುರೇಶ್, ಶೌಕತ್, ರವಿ, ಸುರಭಿ ವಿನಯ್, ಕೆ. ಎಲ್. ಹರೀಶ್ ಬಸಾಪುರ, ಸಂಘಟಕರಾದ ಕುರುಡಿ ಗಿರೀಶ್, ಜಯಪ್ರಕಾಶ್ ಗೌಡ ಉಪಸ್ಥಿತರಿದ್ದರು.



