Connect with us

Dvgsuddi Kannada | online news portal | Kannada news online

ಎಸ್ ಎಸ್ ಕಪ್ ಕ್ರಿಕೆಟ್ ಟೂರ್ನಿಗೆ ಎಸ್ ಪಿ ಹನುಮಂತರಾಯ ಚಾಲನೆ

ಕ್ರೀಡೆ

ಎಸ್ ಎಸ್ ಕಪ್ ಕ್ರಿಕೆಟ್ ಟೂರ್ನಿಗೆ ಎಸ್ ಪಿ ಹನುಮಂತರಾಯ ಚಾಲನೆ

ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಇಲೆವೆನ್ ಕ್ರಿಕೆಟ್ ಕ್ಲಬ್ ಹಾಗೂ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ವತಿಯಿಂದ  ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರ   ಹುಟ್ಟುವರ ಹಬ್ಬದ ಅಂಗವಾಗಿ ಆಯೋಜಿಸಿರುವ ಎಸ್.ಎಸ್. ಕಪ್ -2020 ಟೆನ್ನಿಸ್ ಬಾಲ್ ಟೂರ್ನಿಮೆಂಟ್ ಗೆ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಚಾಲನೆ ನೀಡಿದರು.

sp criket 2

ನಂತರ ಮಾತನಾಡಿದ ಅವರು ಉತ್ತಮ ಆರೋಗ್ಯಕ್ಕೆ ಕ್ರೀಡೆ ಅತಿ ಮುಖ್ಯವಾಗಿದ್ದು, ಈಗಿನ ಯುವಕರು ಮೊಬೈಲ್ ಗೆ ಹೆಚ್ಚು ಗಮನ ನೀಡದೆ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು ಹಾಗೂ ಟೂರ್ನಿಮೆಂಟ್ ನಲ್ಲಿ ಭಾಗವಹಿಸುತ್ತಿರುವ ಎಲ್ಲಾ ಆಟಗಾರರಿಗೂ ಶುಭ ಕೋರಿದರು.

ಈ ಸಂದರ್ಭದಲ್ಲಿ ಬಡಾವಣೆ ಠಾಣೆ ಪಿ.ಎಸ್.ಐ ಅಶ್ವಿನ್ ಕುಮಾರ್, ದಾವಣಗೆರೆ ದಕ್ಷಿಣ ಸಂಚಾರಿ ಪಿ.ಎಸ್.ಐ ಕಿರಣ್ ಕುಮಾರ್, ಕ್ರೀಡಾ ಪ್ರೋತ್ಸಾಹಕರಾದ ಶ್ರೀನಿವಾಸ್ ಶಿವಗಂಗಾ, ಮಹದೇವ್, ರಾಜು ರೆಡ್ಡಿ, ರಮೇಶ್,ಸುರೇಶ್, ಶೌಕತ್, ರವಿ, ಸುರಭಿ ವಿನಯ್,  ಕೆ. ಎಲ್. ಹರೀಶ್ ಬಸಾಪುರ, ಸಂಘಟಕರಾದ  ಕುರುಡಿ ಗಿರೀಶ್, ಜಯಪ್ರಕಾಶ್ ಗೌಡ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಕ್ರೀಡೆ

To Top