Connect with us

Dvgsuddi Kannada | online news portal | Kannada news online

ತಮಿಳುನಾಡಿನಲ್ಲಿ SSLC ಪರೀಕ್ಷೆ ರದ್ದು; ಎಲ್ಲಾ ವಿದ್ಯಾರ್ಥಿಗಳು ಪಾಸ್ 

ಪ್ರಮುಖ ಸುದ್ದಿ

ತಮಿಳುನಾಡಿನಲ್ಲಿ SSLC ಪರೀಕ್ಷೆ ರದ್ದು; ಎಲ್ಲಾ ವಿದ್ಯಾರ್ಥಿಗಳು ಪಾಸ್ 

ಚೆನ್ನೈ : ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಎಸ್ ಎಸ್ ಎಲ್ ಸಿ ಪಬ್ಲಿಕ್‌ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಘೋಷಿಸಿದ್ದಾರೆ.

ಜೂನ್ 15ರಿಂದ ಪ್ರಾರಂಭವಾಗಬೇಕಿದ್ದ 10ನೇ ತರಗತಿಯ ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಹಾಗೆಯೇ 11ನೇ ತರಗತಿಗೆ  ರದ್ದುಪಡಿಸಲಾಗಿದೆ. ಈ ಎಲ್ಲ ವಿದ್ಯಾರ್ಥಿಗಳು ಮುಂದಿನ ತರಗತಿಗಳಿಗೆ ಪ್ರವೇಶ ಪಡೆಯಲು, ಅವರಿಗೆ ಬಡ್ತಿ ನೀಡಲಾಗುವುದು ಎಂದಿದ್ದಾರೆ .

ಈ ಸಂಬಂಧ ಪೋಷಕರು ಪರೀಕ್ಷೆ ನಡೆಸದಂತೆ ಮನವಿ ಮಾಡಿದ್ದರು. ಸಾಂಕ್ರಾಮಿಕ ರೋಗ ತಜ್ಞರ ಅಭಿಪ್ರಾಯ ಪಡೆದು, ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಈ ನಿರ್ಧಾರ ತಗೆದುಕೊಳ್ಳಲಾಗಿದೆ.

ಈಗಾಗಲೇ ತೆಲಂಗಾಣ ರಾಜ್ಯದಲ್ಲೂ  10ನೇ ತರಗತಿಯ  ಪರೀಕ್ಷೆ ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿ ಉತ್ತೀರ್ಣಗೊಳಿಸಲಾಗುವುದು ಎಂದು ಘೋಷಣೆ ಮಾಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top