ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜುಲೈ 3ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೀದರ್, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ.1ರಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.



